Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:32 - ಕನ್ನಡ ಸತ್ಯವೇದವು C.L. Bible (BSI)

32 ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ, ಬೆಳೆದ ಮೇಲೆ ಕಾಯಿಪಲ್ಯದ ಗಿಡಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ; ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣ ಬೀಜವಾಗಿದೆ. ಆದರೆ ಅದು ಬೆಳೆದಾಗ ತೋಟದ ಗಿಡಗಳಿಗಿಂತಲೂ ದೊಡ್ಡದಾಗಿರುವುದು. ಅದು ಮರವಾದಾಗ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಮಾಡಿಕೊಳ್ಳುವಷ್ಟು ದೊಡ್ಡದಾಗಿರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದ್ದರೂ ಅದು ಬೆಳೆದಾಗ, ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು, ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಹೆ ಭ್ಹಿಂಯ್ ಸಗ್ಳಾಂಚ್ಯಾನ್ಕಿ ಬಾರಿಕ್ ಖರೆ ತೆ ಮೊಟೆ ಹೊಲ್ಲ್ಯಾ ತನ್ನಾ ಸಗ್ಳ್ಯಾ ಝಾಡಾಂಚ್ಯಾನ್ಕಿ ಮೊಟೆ ಝಾಡ್ ಹೊತಾ. ತಸೆಮನುನ್ ಮಳ್ಬಾ ವೈಲಿ ಫಾಂಕ್ರಾ ಯೆತ್ಯಾತ್ ಅನಿ ತೆಚ್ಯಾ ಟಾಳಿಯಾಕ್ನಿ ಘಂಟೆ ಭಾಂದ್ತ್ಯಾತ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:32
20 ತಿಳಿವುಗಳ ಹೋಲಿಕೆ  

ಆ ರೆಂಬೆಗಳಲ್ಲಿ ಗೂಡುಮಾಡಿದ್ದವು ಆಕಾಶದ ಪಕ್ಷಿಗಳೆಲ್ಲವು ಅದರಡಿಯಲಿ ಮರಿಗಳನೀಯುತ್ತಿದ್ದವು ಭೂಜಂತುಗಳೆಲ್ಲವು ಅದರ ನೆರಳನಾಶ್ರಯಿಸುತ್ತಿದ್ದವು ಮಹಾಜನಾಂಗಗಳೆಲ್ಲವು.


ಅದರ ಎಲೆಗಳು ಚೆಲುವಾಗಿದ್ದವು. ಅದು ಹಣ್ಣುಗಳಿಂದ ತುಂಬಿತ್ತು. ಅದರಿಂದ ಎಲ್ಲಕ್ಕೂ ಆಹಾರ, ವನ್ಯಮೃಗಗಳಿಗೆ ಅದರ ನೆರಳಿನಲ್ಲಿ ಆಶ್ರಯ, ಆಕಾಶದ ಪಕ್ಷಿಗಳಿಗೆ ಅದರ ಕೊಂಬೆಗಳಲ್ಲಿ ನೆಲೆ, ಎಲ್ಲಾ ಪ್ರಾಣಿಗಳಿಗೂ ಅದರಿಂದ ಪೋಷಣೆ ದೊರಕುತ್ತಿತ್ತು.


ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.


ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.


ಅವುಗಳ ಅರುಗಲ್ಲೇ ಇವೆ ಹಕ್ಕಿಗಳ ಗೂಡುಗಳು I ಕೇಳುತಿವೆ ಕೊಂಬೆಗಳಿಂದಾ ಪಕ್ಷಿಗಳ ಕಲರವಗಳು II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಯೇಸುಸ್ವಾಮಿ ತಮ್ಮ ಉಪದೇಶವನ್ನು ಮುಂದುವರಿಸಿ, “ದೇವರ ಸಾಮ್ರಾಜ್ಯವನ್ನು ಇನ್ನು ಯಾವುದಕ್ಕೆ ಹೋಲಿಸೋಣ? ಅದಕ್ಕಾಗಿ ಯಾವ ಸಾಮತಿಯನ್ನು ಉಪಯೋಗಿಸೋಣ?


ಸಾಸಿವೆಕಾಳು ಚಿಕ್ಕದಾಗಿದ್ದರೂ ಬಿತ್ತನೆಯ ತರುವಾಯ ಮೊಳೆತು ಎಲ್ಲಾ ಕಾಯಿಪಲ್ಯದ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆಯುತ್ತದೆ. ಹಕ್ಕಿಗಳು ಕೂಡ ಬಂದು ಅದರ ನೆರಳಿನಲ್ಲಿ ಗೂಡುಕಟ್ಟಿ ವಾಸಿಸುವಷ್ಟು ದೊಡ್ಡದಾದ ರೆಂಬೆಗಳನ್ನು ಅದು ತಳೆಯುತ್ತದೆ,” ಎಂದರು.


ಆಗ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು