Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:38 - ಕನ್ನಡ ಸತ್ಯವೇದವು C.L. Bible (BSI)

38 ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ ರಾಜ್ಯದ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹೊಲವಂದರೆ ಈ ಲೋಕ; ಒಳ್ಳೆಯ ಬೀಜವಂದರೆ ಪರಲೋಕ ರಾಜ್ಯದವರು; ಹಣಜಿ ಅಂದರೆ ಸೈತಾನನವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆ ಹೊಲ ಈ ಲೋಕವಾಗಿದೆ. ಒಳ್ಳೆಯ ಕಾಳುಗಳೇ ಪರಲೋಕರಾಜ್ಯಕ್ಕೆ ಸೇರಿದ ದೇವರ ಮಕ್ಕಳು. ಕೆಡುಕನಿಗೆ ಸಂಬಂಧಪಟ್ಟವರೇ ಹಣಜಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಹೊಲವು ಈ ಲೋಕ; ಒಳ್ಳೆಯ ಬೀಜವು ದೇವರ ರಾಜ್ಯದ ಮಕ್ಕಳು; ಕಳೆಯು ಕೆಡುಕನ ಮಕ್ಕಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಶೆತ್ ಮಟ್ಲ್ಯಾರ್ ಹ್ಯೊ ಜಗ್ ಬರೆ ಭ್ಹಿಂಯ್ ಮಟ್ಲ್ಯಾರ್, ದೆವಾಚ್ಯಾ ರಾಜಾಕ್ ಸಮಂದ್‍ ಪಡಲ್ಲಿ ಲೊಕಾ. ಕಳೆ ಮಟ್ಲ್ಯಾರ್, ಸೈತಾನಾಕ್ ಸಮಂದ್‍ ಪಡಲ್ಲಿ ಲೊಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:38
27 ತಿಳಿವುಗಳ ಹೋಲಿಕೆ  

ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


“ಎಲವೋ ಪಿಶಾಚಿಕೋರನೇ, ಸರ್ವಸನ್ಮಾರ್ಗಕ್ಕೆ ಶತ್ರು ನೀನು; ಎಲ್ಲಾ ತಂತ್ರ ಕುತಂತ್ರಗಳು ನಿನ್ನಲ್ಲಿ ತುಂಬಿವೆ. ಪ್ರಭುವಿನ ಸನ್ಮಾರ್ಗಕ್ಕೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? ಇಗೋ, ಈಗ ಪ್ರಭುವಿನ ಶಾಪ ನಿನ್ನ ಮೇಲಿದೆ!


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಗೋದಿಯಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸರ್ವಜನಾಂಗಗಳಿಗೂ ಸಾಕ್ಷಿಯಾಗಿ ಜಗತ್ತಿನಲ್ಲೆಲ್ಲಾ ಪ್ರಬೋಧಿಸಲಾಗುವುದು. ಅಂತ್ಯವು ಬರುವುದು ಅನಂತರವೇ.


ನನ್ನ ನಾಮದ ಪ್ರಯುಕ್ತವೇ, ಮಾಡುವೆನು ಇಸ್ರಯೇಲ್ ಏಳಿಗೆಯಾಗುವಂತೆ ಜಗದೊಳಗೆ ತೋರಿಸುವೆನು ಪ್ರೀತಿವಾತ್ಸಲ್ಯವನ್ನು ಲೋರುಹಾಮಳಿಗೆ ಹೇಳುವೆನು ‘ನೀನು ನನ್ನ ಪ್ರಜೆ’ಯೆಂದು ಲೋಅಮ್ಮಿಗೆ ಭಜಿಸುವರವರು ‘ನೀವೇ ನಮ್ಮ ದೇವರು’ ಎಂದು ನನಗೆ.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ವಂದಿಪುದು ಪ್ರಭುವನು ಮುಂದಿನ ಪೀಳಿಗೆ I ಸಾರುವುದಾತನ ವದಂತಿಯನು ಜನರಿಗೆ II


ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.”


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು