Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:39 - ಕನ್ನಡ ಸತ್ಯವೇದವು C.L. Bible (BSI)

39 ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅದನ್ನು ಬಿತ್ತುವ ವೈರಿ ಅಂದರೆ ಸೈತಾನನು; ಸುಗ್ಗೀಕಾಲ ಅಂದರೆ ಯುಗದ ಸಮಾಪ್ತಿ; ಕೊಯ್ಯುವವರು ಅಂದರೆ ದೇವದೂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಹಣಜಿಯನ್ನು ಬಿತ್ತಿದ ವೈರಿಯೇ ಸೈತಾನ. ಸುಗ್ಗಿಕಾಲ ಅಂದರೆ ಲೋಕದ ಅಂತ್ಯಕಾಲ. ಕೂಡಿಸುವ ಕೆಲಸಗಾರರೇ ದೇವದೂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಅನಿ ಕಳೆ ಪೆರ್‍ತಲೊ ದುಸ್ಮಾನ್ ಮಟ್ಲ್ಯಾರ್, ಗಿರೊ. ಸುಗ್ಗಿಚೊ ಕಾಲ್ ಮಟ್ಲ್ಯಾರ್ ಜಗಾಚೊ ಅಕ್ರಿಚೊ ಕಾಲ್. ಸುಗ್ಗಿಚ್ಯಾ ಕಾಲಾಚೆ ಕಾಮ್ಗಾರಿ ಮಟ್ಲ್ಯಾರ್, ದೆವಾಚಿ ದುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:39
29 ತಿಳಿವುಗಳ ಹೋಲಿಕೆ  

ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಸ್ವಾಮಿಯ ಶೂರರೇ, ಕುಡುಗೋಲನ್ನು ಹಾಕಿರಿ; ಫಲ ಪಕ್ವವಾಗಿದೆ. ಬನ್ನಿ, ದ್ರಾಕ್ಷಿಯನ್ನು ತುಳಿಯಿರಿ; ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ರಾಷ್ಟ್ರಗಳ ದುಷ್ಟತನವು ಮಿತಿಮೀರಿದೆ.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.


ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ.


ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತುಹಾಕೋಣವೇ’ ಎಂದರು ಆಳುಗಳು.


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು