Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:44 - ಕನ್ನಡ ಸತ್ಯವೇದವು C.L. Bible (BSI)

44 “ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ದ್ರವ್ಯಕ್ಕೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಬಿಟ್ಟು ಅದರಿಂದಾದ ಸಂತೋಷದಿಂದ ತನ್ನ ಬದುಕನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 “ಸರ್ಗಾಚೊ ರಾಜ್ ಮಟ್ಲ್ಯಾರ್ ಅಶೆ, ಎಕ್ ಮಾನ್ಸಾಕ್ ಎಕ್ ಶೆತಾತ್ ಬದಿಕ್ ಗಾವ್ತಾ, ತೊ ತೆ ಅನಿ ಪರ್ತುನ್ ಧಾಪುನ್ ಥವ್ತಾ, ತೆಚೆಸಾಟ್ನಿ ತೊ ಲೈ ಕುಶಿ ಹೊತಾ ಅನಿ ಜಾವ್ನ್ ಅಪ್ನಾಚೆ ಹೊತ್ತೆ ಸಗ್ಳೆ ಇಕ್ತಾ ಅನಿ ಯೆವ್ನ್ ತೆ ಶೆತ್ ತೊ ಇಕಾತ್ ಘೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:44
29 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.


ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ.”


ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.


ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ಪೇತ್ರನು ಆಗ ಮುಂದೆ ಬಂದು, “ನೋಡಿ, ನಾವು ಎಲ್ಲವನ್ನು ಬಿಟ್ಟುಬಿಟ್ಟು ತಮ್ಮನ್ನು ಹಿಂಬಾಲಿಸಿದ್ದೇವೆ. ನಮಗೇನು ದೊರಕುತ್ತದೆ?” ಎಂದು ಕೇಳಿದನು.


ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.


ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ.


ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ.


ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು.


ಸುಜ್ಞಾನದ ಕ್ರಯ ಯಾರಿಗೂ ಗೊತ್ತಿಲ್ಲ ಜೀವಿತರಲ್ಲಿ ಅದನ್ನು ಕಂಡವರಿಲ್ಲ.


ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನು ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ.


“ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು