Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:46 - ಕನ್ನಡ ಸತ್ಯವೇದವು C.L. Bible (BSI)

46 ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನು ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು ತನ್ನ ಬದುಕನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಒಂದು ದಿನ ಆ ವ್ಯಾಪಾರಿಗೆ ಬಹು ಅಮೂಲ್ಯವಾದ ಒಂದು ಮುತ್ತು ಸಿಕ್ಕಿತು. ಆಗ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಅನಿ ತೆಕಾ ಬರಿಲಿ ಮೊತಿ ಗಾವ್ತಾ. ತನ್ನಾ ತೊ ಜಾವ್ನ್ ಅಪ್ನಾಚೆ ಸಗ್ಳೆ ಇಕ್ತಾ ಅನಿ ತಿ ಮೊತಿ ಇಕಾತ್ ಘೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:46
15 ತಿಳಿವುಗಳ ಹೋಲಿಕೆ  

ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.


ನಿಮ್ಮ ಕಾಲಕ್ಕೆ ಬೇಕಾದ ಸ್ಥಿರತೆಯನ್ನು ನೀಡುವರು. ರಕ್ಷಣೆಗೆ ಬೇಕಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುವರು. ಸರ್ವೇಶ್ವರ ಸ್ವಾಮಿಯಲ್ಲಿ ನಿಮಗಿರುವ ಭಯಭಕ್ತಿಯೇ ನಿಮ್ಮ ನಿಧಿಯಾಗಿರುವುದು.


ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು.


ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಹೆಬ್ಬಾಗಿಲನ್ನು ಒಂದೊಂದು ಮುತ್ತಿನಿಂದ ಮಾಡಲಾಗಿತ್ತು. ನಗರದ ಬೀದಿ ಸ್ವಚ್ಛವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.


ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.


“ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತುರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು.


“ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.


ಇವರು ಚಿನ್ನ, ಬೆಳ್ಳಿ, ಮುತ್ತು ರತ್ನಾಭರಣಗಳನ್ನೂ ನಯವಾದ ನಾರುಮಡಿ, ಕೆನ್ನೀಲಿಯ ವಸ್ತ್ರ, ರೇಷ್ಮೆ ಬಟ್ಟೆ ಮತ್ತು ಕಡುಗೆಂಪು ಉಡುಪುಗಳನ್ನೂ ಎಲ್ಲಾ ಬಗೆಯ ಗಂಧಕ ಚಕ್ಕೆಗಳನ್ನೂ ಎಲ್ಲಾ ವಿಧದ ದಂತದ ಸಾಮಾನುಗಳನ್ನೂ ಬಹು ಬೆಲೆಬಾಳುವ ಮರದ, ಕಂಚಿನ, ಕಬ್ಬಿಣದ, ಚಂದ್ರಕಾಂತ ಶಿಲೆಯ ಸಾಮಾನುಗಳನ್ನೂ ಅವಳಿಗೆ ಮಾರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು