Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:47 - ಕನ್ನಡ ಸತ್ಯವೇದವು C.L. Bible (BSI)

47 “ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 “ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಮತ್ತು ಪರಲೋಕರಾಜ್ಯವು ಒಂದು ಬಲೆಗೆ ಹೋಲಿಕೆಯಾಗಿದೆ. ಅದನ್ನು ಸಮುದ್ರದಲ್ಲಿ ಹಾಕಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 “ಪರಲೋಕರಾಜ್ಯವು ಸರೋವರದೊಳಗೆ ಬೀಸಿದ ಬಲೆಯಂತಿದೆ. ಆ ಬಲೆಗೆ ಅನೇಕ ಜಾತಿಯ ಮೀನುಗಳು ಸಿಕ್ಕಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 “ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 “ಸರ್‍ಗಾಚೆ ರಾಜ್ ಅಸೆಬಿ ಮನುಕ್ ಹೊತಾ. ಉಲ್ಲೆ ಮಾಸೊಳ್ಯಾಕಾರ್ ಸಮುಂದರಾತ್ ಮಾಸೊಳ್ಯಾ ಧರುಕ್ ಮನುನ್ ಜಾಳೆ ಸೊಡ್ತ್ಯಾತ್ ಅನಿ ತ್ಯಾ ಜಾಳ್ಯಾತ್ ಸಗ್ಳ್ಯಾ ಜಾತಿಚ್ಯಾ ಮಾಸೊಳ್ಯಾ ಶಿರಕ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:47
33 ತಿಳಿವುಗಳ ಹೋಲಿಕೆ  

ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


“ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ.


ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿ ಬನ್ನಿ, ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಕರೆದರು.


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು.


ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, “ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ,” ಎಂದರು.


“ನನ್ನನ್ನು ಹಿಂಬಾಲಿಸಿ ಬನ್ನಿ. ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಹೇಳಿ ಯೇಸು ಅವರನ್ನು ಕರೆದರು.


ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವುವು.


“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.


ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನು ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ.


ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು