Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:33 - ಕನ್ನಡ ಸತ್ಯವೇದವು C.L. Bible (BSI)

33 ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ಢೊನಿತ್ಲ್ಯಾ ಶಿಸಾನಿ ಜೆಜುಚೆ ಆರಾದನ್ ಕರ್‍ಲ್ಯಾನಿ, ಅನಿ “ತಿಯಾ ಖರೆಚ್ ದೆವಾಚೊ ಲೆಕ್.” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:33
27 ತಿಳಿವುಗಳ ಹೋಲಿಕೆ  

ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


“ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ದೇವರ ಪುತ್ರರಾದ ಯೇಸುಕ್ರಿಸ್ತರ ಶುಭಸಂದೇಶ. ಇದು ಪ್ರವಾದಿ ಯೆಶಾಯನು ಮೊದಲೇ ಬರೆದಿಟ್ಟ ಪ್ರಕಾರ ಪ್ರಾರಂಭವಾಯಿತು:


ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.


ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ.


ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರುನಿಂತು ನೋಡುತ್ತಿದ್ದ ಶತಾಧಿಪತಿ, “ಸತ್ಯವಾಗಿಯೂ ಈ ಮನುಷ್ಯ ದೇವರ ಪುತ್ರ!” ಎಂದನು.


ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು.


ತಟ್ಟನೆ, ಯೇಸುವೇ ಅವರನ್ನು ಎದುರುಗೊಂಡು, “ನಿಮಗೆ ಶುಭವಾಗಲಿ!” ಎಂದರು. ಆ ಮಹಿಳೆಯರು ಹತ್ತಿರಕ್ಕೆ ಬಂದು, ಅವರ ಪಾದಕ್ಕೆರಗಿ ಪೂಜಿಸಿದರು.


ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.


ಶಿಷ್ಯರು (ಅವರನ್ನು ಆರಾಧಿಸಿ) ಅತ್ಯಾನಂದದಿಂದ ಜೆರುಸಲೇಮಿಗೆ ಹಿಂದಿರುಗಿದರು.


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


ಆದರೂ ಆಕೆ ಯೇಸುವಿಗೆ ಅಡ್ಡಬಿದ್ದು, “ಸ್ವಾಮೀ, ಸಹಾಯ ಮಾಡಿ,” ಎಂದು ಯಾಚಿಸಿದಳು.


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ಅದಕ್ಕೆ ಅವರು, “ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ.


ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.


ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.


ಆದರೆ ಯೇಸು ಮೌನವಾಗಿದ್ದರು. ಯಾವ ಉತ್ತರವನ್ನೂ ಕೊಡಲಿಲ್ಲ. ಪ್ರಧಾನಯಾಜಕನು ಪುನಃ, “ಸ್ತುತ್ಯ ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕ ನೀನೋ?” ಎಂದು ಕೇಳಿದನು.


ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಅನಂತರ ಅವರಿಬ್ಬರೂ ದೋಣಿಯನ್ನು ಹತ್ತಿದರು. ಕೂಡಲೇ ಗಾಳಿ ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು