Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:2 - ಕನ್ನಡ ಸತ್ಯವೇದವು C.L. Bible (BSI)

2 “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಸಂಪ್ರದಾಯಗಳನ್ನು ಮೀರುವುದೇಕೆ? ಅವರು ಊಟಕ್ಕೆ ಮುಂಚೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಶಿಷ್ಯರು ಹಿರಿಯರಿಂದ ಬಂದ ಸಂಪ್ರದಾಯವನ್ನು ಯಾಕೆ ಮೀರುತ್ತಾರೆ? ಅವರು ಕೈತೊಳಕೊಳ್ಳದೆ ಆಹಾರ ತೆಗೆದುಕೊಳ್ಳುತ್ತಾರಲ್ಲಾ ಎಂದು ಕೇಳಿದ್ದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯವನ್ನು ಏಕೆ ಮೀರುತ್ತಾರೆ? ಅವರು ಊಟಕ್ಕೆ ಮುಂಚೆ ತಮ್ಮ ಕೈಗಳನ್ನು ಏಕೆ ತೊಳೆದುಕೊಳ್ಳುವುದಿಲ್ಲ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ತುಜಿ ಶಿಸಾ ಅದ್ಲ್ಯಾ ಲೊಕಾನಿ ಕರಲ್ಲ್ಯಾ ಪದ್ದತಿಯಾ ಕಶ್ಯಾಕ್ ಮೊಡ್ತ್ಯಾತ್? ತೆನಿ ಜೆವ್ನಾಚ್ಯಾ ಅದ್ದಿ ಅಪ್ನಾಚಿ ಹಾತಾ ಧುವ್ನ್ ಘೆಯ್‌ನ್ಯಾತ್.” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:2
10 ತಿಳಿವುಗಳ ಹೋಲಿಕೆ  

ಊಟಕ್ಕೆ ಮುಂಚೆ ಅವರು ಕೈ ತೊಳೆಯದೆಹೋದುದನ್ನು ಕಂಡು ಫರಿಸಾಯನು ಚಕಿತನಾದನು.


ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು.


ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.


ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.


ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?" ಎಂದು ಯೇಸುವನ್ನು ಕೇಳಿದರು.


ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ನಿಮ್ಮ ಸಂಪ್ರದಾಯದ ಸಲುವಾಗಿ ನೀವು ದೇವರ ಆಜ್ಞೆಯನ್ನು ಮೀರುತ್ತೀರಲ್ಲ, ಅದೇಕೆ?”


ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.


ಇದನ್ನು ಗಮನಿಸಿದ ಅರಮನೆಯ ದ್ವಾರಪಾಲಕರು, “ನೀನು ಅರಸನ ಆಜ್ಞೆಯನ್ನು ಮೀರುವುದೇಕೆ?” ಎಂದು ಮೊರ್ದೆಕೈಯನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು