Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:28 - ಕನ್ನಡ ಸತ್ಯವೇದವು C.L. Bible (BSI)

28 ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಯೇಸು ಆಕೆಗೆ - ಅಮ್ಮಾ, ನಿನ್ನ ನಂಬಿಕೆ ಬಹಳ; ನಿನ್ನ ಮನಸ್ಸಿನಂತೆ ಆಗಲಿ ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಉತ್ತರವಾಗಿ ಆಕೆಗೆ, “ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ,” ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೆಚೆಸಾಟ್ನಿ ಜೆಜುನ್ ತಿಕಾ,“ತಿಯಾ ಎಕ್ ಘಟ್ ವಿಶ್ವಾಸ್ ಹೊತ್ತಿ ಬಾಯ್ಕೊಮನುಸ್! ತುಕಾ ಕಾಯ್ ಪಾಜೆ ಹೊಲ್ಲೆ ಹಾಯ್ ತೆ ಹೊಂವ್ದಿತ್!” ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ತಿಚಿ ಲೆಕ್ ಗುನ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:28
21 ತಿಳಿವುಗಳ ಹೋಲಿಕೆ  

ಅನಂತರ ಯೇಸು ಆ ಶತಾಧಿಪತಿಗೆ, “ಇನ್ನು ಮನೆಗೆ ಹೋಗು, ನೀನು ವಿಶ್ವಾಸಿಸಿದಂತೆಯೇ ಆಗುವುದು,” ಎಂದರು. ಅದೇ ಕ್ಷಣದಲ್ಲಿ ಅವನ ಸೇವಕನು ಸ್ವಸ್ಥನಾದನು.


ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು.


ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.


ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


“ಸ್ವಾಮೀ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದು ಪ್ರೇಷಿತರು ಕೇಳಿಕೊಂಡರು.


ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿನೋಡಿ, “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.


ಆಗ ಆಕೆ, “ಅದು ನಿಜ ಸ್ವಾಮೀ, ನಾಯಿಗಳಾದರೂ ತಮ್ಮ ಯಜಮಾನನ ಮೇಜಿನಿಂದ ಕೆಳಕ್ಕೆ ಬೀಳುವ ಚೂರುಪಾರನ್ನು ತಿನ್ನುತ್ತವೆ, ಅಲ್ಲವೇ?’ ಎಂದು ಮರುತ್ತರ ಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು