Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:20 - ಕನ್ನಡ ಸತ್ಯವೇದವು C.L. Bible (BSI)

20 ಅನಂತರ ಯೇಸು ತಮ್ಮ ಶಿಷ್ಯರಿಗೆ ತಾವು ‘ಅಭಿಷಿಕ್ತರಾದ ಲೋಕೋದ್ಧಾರಕ’ ಎಂಬುದನ್ನು ಯಾರಿಗೂ ಹೇಳಕೂಡದೆಂದು ಕಟ್ಟಪ್ಪಣೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಆತನು - ನಾನು ಕ್ರಿಸ್ತನಾಗಿದ್ದೇನೆಂಬದನ್ನು ಯಾರಿಗೂ ಹೇಳಬೇಡಿರಿ ಎಂದು ಶಿಷ್ಯರಿಗೆ ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಳಿಕ ಯೇಸು ತನ್ನ ಶಿಷ್ಯರಿಗೆ, ತಾನು ಕ್ರಿಸ್ತನೆಂಬುದನ್ನು ಯಾರಿಗೂ ಹೇಳಕೂಡದೆಂದು ಎಚ್ಚರಿಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತರುವಾಯ ಯೇಸು, ತಾನೇ ಕ್ರಿಸ್ತ ಎಂಬುದನ್ನು ಯಾರಿಗೂ ಹೇಳಬಾರದೆಂದು ತಮ್ಮ ಶಿಷ್ಯರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಾನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಮಿಯಾಚ್ ಕ್ರಿಸ್ತ್ ಮನುನ್ ಕೊನಾಕ್‍ಬಿ ಸಾಂಗುನಕಾಸಿ ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:20
16 ತಿಳಿವುಗಳ ಹೋಲಿಕೆ  

ಆಗ ಯೇಸು, “ಈ ವಿಷಯವನ್ನು ಯಾರಿಗೂ ತಿಳಿಸಬೇಡಿ,” ಎಂದು ತಮ್ಮ ಶಿಷ್ಯರಿಗೆ ಕಟ್ಟಪ್ಪಣೆ ಮಾಡಿದರು.


ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಯೇಸು ಶಿಷ್ಯರನ್ನು ಆಜ್ಞಾಪೂರ್ವಕವಾಗಿ ಎಚ್ಚರಿಸಿದರು.


ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, “ನಮಗೆ ‘ಮೆಸ್ಸೀಯ’ ಸಿಕ್ಕಿದ್ದಾರೆ,” ಎಂದು ತಿಳಿಸಿ


ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.


ಆ ವಾಣಿ ಆದಮೇಲೆ ಕಾಣಿಸಿಕೊಂಡವರು ಯೇಸು ಮಾತ್ರ. ಶಿಷ್ಯರು ತಾವು ನೋಡಿದ್ದನ್ನು ಕುರಿತು ಆ ದಿನಗಳಲ್ಲಿ ಏನನ್ನೂ ಹೇಳದೆ, ಯಾರಿಗೂ ತಿಳಿಸದೆ, ತತ್ಕಾಲ ಮೌನದಿಂದ ಇದ್ದರು.


ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ಅಸತ್ಯವಾದಿ ಎಂದರೆ ಯಾರು? ಯೇಸುವೇ ಕ್ರಿಸ್ತ ಎಂಬುದನ್ನು ಯಾರು ಅಲ್ಲಗಳೆಯುತ್ತಾನೋ ಅವನೇ ಅಸತ್ಯವಾದಿ; ಅವನೇ ಕ್ರಿಸ್ತವಿರೋಧಿ. ಅವನು ಪಿತನನ್ನು ಮತ್ತು ಪುತ್ರನನ್ನು ತಿರಸ್ಕರಿಸುತ್ತಾನೆ.


“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.


ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದುಬರುವಾಗ, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.


ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು;


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


“ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು