Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:17 - ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ಜೆಜುನ್,“ಯೆ,ವಿಶ್ವಾಸ್ ನಸಲ್ಲ್ಯಾ ಬುರ್ಶ್ಯಾ ಪಿಳ್ಗಿಚ್ಯಾನು, ಅನಿ ಕವ್ಡೆ ದಿಸ್ ತುಮ್ಚ್ಯಾ ವಾಂಗ್ಡಾ ಮಿಯಾ ರ್‍ಹಾವ್ಚೆ? ಅನಿ ಕವ್ಡೆ ಪತರ್ ಮಿಯಾ ತುಮ್ಕಾ ಸಂಬಾಳುನ್ ಘೆವ್ನ್ ಜವ್ಚೆ? ತ್ಯಾ ಪೊರಾಕ್ ಮಾಜೆಕ್ಡೆ ಘೆವ್ನ್ ಯೆವಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:17
25 ತಿಳಿವುಗಳ ಹೋಲಿಕೆ  

ಮೋಶೆಗೆ ಸರ್ವೇಶ್ವರ, “ಇನ್ನೆಷ್ಟುಕಾಲ ಈ ಜನರು ನನ್ನನ್ನು ಅಲಕ್ಷ್ಯ ಮಾಡುವರು? ನಾನು ಮಾಡಿದ ಮಹತ್ಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಇನ್ನೆಷ್ಟು ಕಾಲ ನಂಬದೆ ಇರುವರು?


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?


ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು.


ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


“ನನಗೆ ವಿರೋಧವಾಗಿ ಗೊಣಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟುಕಾಲ ಸಹಿಸಲಿ! ಈ ಇಸ್ರಯೇಲರು ನನಗೆ ವಿರುದ್ಧ ಗೊಣಗುಟ್ಟುವ ಮಾತುಗಳು ನನಗೆ ಕೇಳಿಸಿವೆ.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು.


ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು!


ಇದನ್ನಾಲಿಸಿದ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ದುಷ್ಟ ಪೀಳಿಗೆಯೇ, ಇನ್ನೆಷ್ಟುಕಾಲ ನಿಮ್ಮೊಂದಿಗಿದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದರು.


ಇದನ್ನು ಗಮನಿಸಿದ ಯೇಸು, “ಅಲ್ಪವಿಶ್ವಾಸಿಗಳೇ, ರೊಟ್ಟಿಯನ್ನು ತಂದಿಲ್ಲವೆಂದು ನಿಮ್ಮನಿಮ್ಮಲ್ಲೇ ಚರ್ಚೆ ಏಕೆ?


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಆಗ ಸರ್ವೇಶ್ವರ, “ಎಲ್ಲಿಯವರೆಗೆ ನೀವು ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?


ಸೋಮಾರಿಯೇ, ಎಷ್ಟು ಹೊತ್ತು ನಿದ್ರಿಸುವೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?


ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II


ಅವರಾದರೋ ದ್ರೋಹಿಗಳು, ಮಕ್ಕಳೆನಿಸಿಕೊಳ್ಳಲು ಅಯೋಗ್ಯರು ವಕ್ರಬುದ್ಧಿಯುಳ್ಳವರು, ಮೂರ್ಖಜಾತಿಯವರು.


ಸರ್ವೇಶ್ವರ ಅವರ ಮನಸ್ಸಿನಲ್ಲಿ ಚಂಚಲಭಾವವನ್ನು ಮೂಡಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಅತ್ತಿತ್ತ ಓಲಾಡುವ ಪ್ರಕಾರ ಈಜಿಪ್ಟಿನವರು ತಮ್ಮ ಒಂದೊಂದು ಕೆಲಸಕಾರ್ಯದಲ್ಲೂ ಅಸ್ಥಿರರಾಗಿರುವಂತೆ ಮಾಡಿದ್ದಾರೆ.


ಅವನನ್ನು ತಮ್ಮ ಶಿಷ್ಯರ ಬಳಿಗೆ ಕರೆದುಕೊಂಡು ಬಂದೆ. ಆದರೆ ಅವನನ್ನು ಗುಣಪಡಿಸಲು ಅವರಿಂದಾಗಲಿಲ್ಲ,” ಎಂದು ಮೊಣಕಾಲೂರಿ ಯಾಚಿಸಿದನು.


ಅನಂತರ ಆ ಹುಡುಗನಲ್ಲಿದ್ದ ದೆವ್ವವನ್ನು ಅವರು ಗದರಿಸಿದೊಡನೆಯೇ, ಅದು ಅವನನ್ನು ಬಿಟ್ಟುಹೋಯಿತು. ಅವನು ತಕ್ಷಣವೇ ಸ್ವಸ್ಥನಾದನು.


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು