Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:15 - ಕನ್ನಡ ಸತ್ಯವೇದವು C.L. Bible (BSI)

15 “ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ನಿನ್ನ ಸಹೋದರನು ತಪ್ಪುಮಾಡಿದರೆ ನೀನು ಹೋಗಿ ನೀನೂ ಅವನೂ ಇಬ್ಬರೇ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜರ್ ತರ್ ಎಕ್ ಭಾವಾನ್, ತುಮ್ಚ್ಯಾ ವಿರೊದ್ ಜಾವ್ನ್ ಪಾಪ್ ಕರ್ಲ್ಯಾರ್, ತೆಕಾ ಕಡೆಕ್ ಬಲ್ವುನ್ ಘೆವ್ನ್ ತೆಚಿ ಚುಕ್ ತೆಕಾ ದಾಕ್ವುನ್ ದಿವಾ, ತೆನಿ ತುಮಿ ಸಾಂಗಲ್ಲೆ ಆಯಿಕ್ಲ್ಯಾನ್ ತರ್ ತಿಯಾ ತುಜ್ಯಾ ಭಾವಾಕ್ ಜಿಕ್ಲ್ಯಾ ಸರ್ಕೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:15
21 ತಿಳಿವುಗಳ ಹೋಲಿಕೆ  

“ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.


ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪುಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಆದರೂ ಅವನನ್ನು ಶತ್ರುವೆಂದು ಭಾವಿಸದೆ, ಸಹೋದರನಂತೆ ಕಂಡು, ಬುದ್ಧಿಹೇಳಿರಿ.


“ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಕೇಡಿಗೆ ಸೋಲದೆ, ಒಳಿತಿನಿಂದ ಕೇಡನ್ನು ಸೋಲಿಸು.


ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.


ಹೀಗೆ ನೀವು ನಿಮ್ಮ ಸಹೋದರರ ದುರ್ಬಲ ಮನಸ್ಸಾಕ್ಷಿಯನ್ನು ನೋಯಿಸಿ, ಅವರ ವಿರುದ್ಧ ಪಾಪ ಕಟ್ಟಿಕೊಳ್ಳುವುದರಿಂದ ಯೇಸುಕ್ರಿಸ್ತರ ವಿರುದ್ಧವೇ ಪಾಪಮಾಡುತ್ತೀರಿ.


ಸಜ್ಜನರು ಈವುದು ಜೀವಫಲ; ದುರ್ಜನರು ಪಡೆವುದು ಅಕಾಲಮರಣ.


ನಾನು ನಿಮಗೆ ಆ ಪತ್ರವನ್ನು ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ-ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ.


ಅನಂತರ ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾಮೀ, ನನಗೆ ವಿರುದ್ಧ ದ್ರೋಹಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು.


ಕ್ರೈಸ್ತಸಭೆಯಲ್ಲಿ ಭೇದಭಾವ ಹುಟ್ಟಿಸುವವನಿಗೆ ಒಂದೆರಡು ಸಾರಿ ಬುದ್ಧಿಹೇಳು. ಅನಂತರ ಅವನಷ್ಟಕ್ಕೇ ಬಿಟ್ಟುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು