Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:23 - ಕನ್ನಡ ಸತ್ಯವೇದವು C.L. Bible (BSI)

23 ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದದರಿಂದ ಪರಲೋಕರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಪರಲೋಕರಾಜ್ಯವು ತನ್ನ ಸೇವಕರು ತನಗೆ ಕೊಡಬೇಕಿದ್ದ ಸಾಲದ ಹಣವನ್ನು ವಸೂಲಿ ಮಾಡಲು ತೀರ್ಮಾನಿಸಿದ ಒಬ್ಬ ರಾಜನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಆದ್ದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕ ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕಶ್ಯಾಕ್ ಸರ್ಗಾಚೊ ರಾಜ್ ಮಟ್ಲ್ಯಾರ್, ಅಶೆ ಎಗ್ದಾ ಎಕ್ ರಾಜಾ ಹೊತ್ತೊ, ತೆನಿ ಅಪ್ನಾಚ್ಯಾ ಆಳಾಂಚೊ ಲೆಕ್ಕ್ ಇಚಾರುಚೆ ಮನುನ್ ನಿರ್‍ದಾರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:23
17 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ.


ನಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕವನ್ನು ಒಪ್ಪಿಸಬೇಕು.


“ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.


“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


“ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ.


ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”


ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.


“ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು.


“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.


ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು