Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:28 - ಕನ್ನಡ ಸತ್ಯವೇದವು C.L. Bible (BSI)

28 “ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ತೊ ಸೆವಕ್ ಭಾಯ್ರ್ ಗೆಲೊ, ಅನಿ ಜಾತಾನಾ ತೆಕಾ ತೆಚ್ಯಾ ವಾಂಗುಡ್ಚೊ ಎಕ್ ಆಳ್ ಗಾವ್ಲೊ. ತೆನಿ ತೆಕಾ ಎಕ್ ಸೆಂಬರ್ ರುಪಯ್ ರಿನ್ ದಿತಲೆ ಹೊತ್ತೆ. ತನ್ನಾ ತೆನಿ ತೆಕಾ ಧರ್‍ಲ್ಯಾನ್, ಅನಿ ತೆಚೊ ನರ್‍ಡೊ ಹಿಚ್ಕುನ್, ಮಾಜೆ ದಿತಲೆ ಹಾಯ್ ತೆ ಅತ್ತಾಚ್ ಮಾಕಾ ದಿ. ಮನುನ್ ಸಾಂಗುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:28
15 ತಿಳಿವುಗಳ ಹೋಲಿಕೆ  

ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.


ಹೇಗೆಂದರೆ, ಸರ್ವೇಶ್ವರನೇ ನೇಮಿಸಿದ ಬಿಡುಗಡೆಯ ಸಂವತ್ಸರ ಪ್ರಕಟವಾಗಿದೆ. ಆದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು; ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.


ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;


ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೆ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿದೆ.


ದಲಿತರನ್ನೇ ಹಿಂಸಿಸುವ ಬಡವ, ಕಾಳೂ ಉಳಿಯದಂತೆ ಜಡಿಯುವ ಮಳೆಗೆ ಸಮಾನ.


ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿಬಿಟ್ಟ.


ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ.


ಆಗ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿ,” ಎಂದರು. ಅದಕ್ಕೆ ಶಿಷ್ಯರು, “ನಾವು ಹೋಗಿ ಇನ್ನೂರು ದೆನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುತಂದು ಅವರಿಗೆ ಊಟಕ್ಕೆ ಬಡಿಸೋಣವೇನು?” ಎಂದರು.


ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಳಿಗಿಂತ ಹೆಚ್ಚು ಬೆಲೆಗೆ ಮಾರಿ, ಆ ಹಣವನ್ನು ಬಡವರಿಗೆ ಕೊಡಬಹುದಾಗಿತ್ತಲ್ಲವೆ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು, ಆಕೆಯನ್ನು ನಿಂದಿಸಿದರು.


ಆಗ ಯೇಸು, “ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು.


ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ.


ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು