Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:12 - ಕನ್ನಡ ಸತ್ಯವೇದವು C.L. Bible (BSI)

12 ತಾಯಿಯ ಉದರದಿಂದಲೇ ನಪುಂಸಕರಾಗಿ ಹುಟ್ಟಿದವರಿದ್ದಾರೆ; ಜನರಿಂದ ನಪುಂಸಕರಾದವರು ಕೂಡ ಇದ್ದಾರೆ; ಸ್ವರ್ಗಸಾಮ್ರಾಜ್ಯದ ನಿಮಿತ್ತ ಅವಿವಾಹಿತರಾಗಿ ಇರುವವರೂ ಇದ್ದಾರೆ; ಇದನ್ನು ಅಂಗೀಕರಿಸಬಲ್ಲವನು ಅಂಗೀಕರಿಸಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ; ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ; ಮತ್ತು ಪರಲೋಕರಾಜ್ಯದ ನಿವಿುತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಅಂಗೀಕರಿಸಬಲ್ಲವನು ಅಂಗೀಕರಿಸಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕೆಲವರು ಮದುವೆ ಆಗದಿರಲು ಬೇರೆಬೇರೆ ಕಾರಣಗಳಿವೆ. ಹುಟ್ಟಿದಂದಿನಿಂದಲೇ ಕೆಲವರು ನಪುಂಸಕರಾಗಿರುತ್ತಾರೆ. ಇನ್ನು ಕೆಲವರು ಬೇರೆಯವರಿಂದ ನಪುಂಸಕರಾಗಿ ಮಾಡಲ್ಪಡುತ್ತಾರೆ. ಬೇರೆ ಕೆಲವರು ಪರಲೋಕರಾಜ್ಯಕ್ಕೋಸ್ಕರ ಮದುವೆಯನ್ನು ತೊರೆದುಬಿಡುತ್ತಾರೆ. ಆದರೆ ಮದುವೆ ಆಗುವಂಥವನು ಮದುವೆ ವಿಷಯವಾದ ಈ ಬೋಧನೆಯನ್ನು ಸ್ವೀಕರಿಸಬೇಕು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಮ್ಮ ತಾಯಿಯ ಗರ್ಭದಿಂದ ಹುಟ್ಟಿದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಕೆಲವರು ಮನುಷ್ಯರಿಂದ ಮಾಡಲಾದ ನಪುಂಸಕರು ಇದ್ದಾರೆ. ಇನ್ನು ಕೆಲವರು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರೂ ಇದ್ದಾರೆ. ಇದನ್ನು ಸ್ವೀಕರಿಸಬಲ್ಲವನು ಸ್ವೀಕರಿಸಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾನುಸ್ ನಗಿನ್ ಹೊಯ್‍ನಸ್ತಾನಾ ರ್‍ಹಾವ್ಕ್ ದುಸ್ರೆ- ದುಸ್ರೆ ಕಾರನ್ ಹಾತ್. ಉಲ್ಲಿ ಲೊಕಾ, ಹಿಜ್ಡೆ ಹೊವ್ನ್ ಉಪಾಜ್ತಾತ್ , ಅನಿ ಉಲ್ಲ್ಯಾಸ್ಯಾ ಲೊಕಾಕ್ನಿ ಮಾನ್ಸಾನಿ ಹಿಜ್ಡೆ ಕರುನ್ ಥವ್ಲ್ಯಾನಾತ್, ಅನಿ ಉಲ್ಲಿ ಲೊಕಾ ಸರ್‍ಗಾಚ್ಯಾ ರಾಜಾ ಸಾಟ್ನಿ ಹಿಜ್ಡೆ ಹೊವ್ನ್ ಹಾತ್. ಜೊ ಕೊನ್ ಹೆ ಶಿಕಾಪ್ ಮಾನುನ್ ಘೆವ್ಕ್ ತಯಾರ್ ಹಾಯ್ ತೊ ತೆ, ಮಾನುನ್ ಘೆಂವ್ದಿತ್.” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:12
8 ತಿಳಿವುಗಳ ಹೋಲಿಕೆ  

ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?


ನೀನು ಪಡೆದ ಮಕ್ಕಳಲ್ಲಿ ಕೆಲವರನ್ನು, ನಿನ್ನ ಸ್ವಂತ ಪುತ್ರರನ್ನು ತೆಗೆದುಕೊಂಡು ಹೋಗಿ ಬಾಬಿಲೋನಿಯರ ಅರಸರ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,” ಎಂದು ಹೇಳಿದನು.


ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಚಲಾಯಿಸಲಿಲ್ಲ. ಚಲಾಯಿಸಬೇಕೆಂಬ ಉದ್ದೇಶದಿಂದಲೂ ಇದನ್ನು ಬರೆಯುತ್ತಿಲ್ಲ. ಅದಕ್ಕಿಂತಲೂ ಸಾಯುವುದೇ ಲೇಸು. ಈ ನನ್ನ ಹೆಮ್ಮೆಯನ್ನು ಯಾರೂ ಅಪಹರಿಸಲಾರರು.


ಅದಕ್ಕೆ ಯೇಸು, “ಇದನ್ನು ಅಂಗೀಕರಿಸಲು ಎಲ್ಲರಿಂದಲೂ ಸಾಧ್ಯವಿಲ್ಲ; ಯಾರಿಗೆ ಅನುಗ್ರಹಿಸಲಾಗಿದೆಯೋ ಅವರಿಂದ ಮಾತ್ರ ಸಾಧ್ಯ.


ಅನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಂಡರು. ಶಿಷ್ಯರು ಅವರನ್ನು ಗದರಿಸಿದರು.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು