Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:13 - ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಂಡರು. ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ತಂದು ಆತನು ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಲು ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಜನರು ಯೇಸುವಿನ ಬಳಿಗೆ ಬಂದು ತಮ್ಮ ಚಿಕ್ಕ ಮಕ್ಕಳನ್ನು ತಂದು ಅವರಿಗಾಗಿ ಪ್ರಾರ್ಥಿಸಬೇಕೆಂದು ಆತನನ್ನು ಬೇಡಿಕೊಂಡರು. ಇದನ್ನು ಕಂಡ ಶಿಷ್ಯರು ಚಿಕ್ಕ ಮಕ್ಕಳನ್ನು ಆತನ ಬಳಿಗೆ ತರಕೂಡದೆಂದು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ತಮ್ಮ ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೆಲವು ಜನರು ಚಿಕ್ಕಮಕ್ಕಳನ್ನು ಯೇಸುವಿನ ಬಳಿಗೆ ತಂದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಉಲ್ಲ್ಯಾಸ್ಯಾ ಲೊಕಾನಿ ಪೊರಾಂಚ್ಯಾ ವರ್‍ತಿ ಹಾತ್ ಥವ್ನ್ ಮಾಗ್ನಿ ಕರುನ್ ಘೆವ್‍ಸಾಟ್ನಿ ಮನುನ್ ಜೆಜುಕ್ಡೆ ಯೆಲ್ಯಾನಿ. ಖರೆ ಶಿಸಾನಿ ಲೊಕಾಕ್ನಿ ಅಡ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:13
15 ತಿಳಿವುಗಳ ಹೋಲಿಕೆ  

ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಏಕೆಂದರೆ, ಕ್ರೈಸ್ತವಿಶ್ವಾಸಿಯಾದ ಸತಿಯ ಮುಖಾಂತರ ಪತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾನೆ. ಅಂತೆಯೇ ಕ್ರೈಸ್ತವಿಶ್ವಾಸಿಯಾದ ಪತಿಯ ಮುಖಾಂತರ ಸತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾಳೆ. ಇಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವಜನರೊಂದಿಗೆ ಸಂಬಂಧ ಉಳ್ಳವರಾಗಿದ್ದಾರೆ.


ಸುಮ್ಮನಿರಬೇಕೆಂದು ಜನರು ಅವರನ್ನು ಗದರಿಸಿದರು. ಅವರಾದರೋ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.


ಇದನ್ನು ಕೇಳಲಾಗದೆ ಪೇತ್ರನು ಯೇಸುವನ್ನು ಪಕ್ಕಕ್ಕೆ ಕರೆದು, “ಪ್ರಭೂ, ಹಾಗೆನ್ನಲೇಬೇಡಿ, ನಿಮಗೆಂದಿಗೂ ಹಾಗೆ ಸಂಭವಿಸದಿರಲಿ,” ಎಂದು ಪ್ರತಿಭಟಿಸಿದನು.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಅನಂತರ ಆಕೆ ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನು ಹಾಗೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತಂದಿದ್ದರು.


ಕೆಲವು ಕಾಲವಾದ ಮೇಲೆ, “ತಂದೆ ಬಹಳ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದಾರೆ,” ಎಂಬ ಸುದ್ದಿ ಜೋಸೆಫನಿಗೆ ಬಂದಿತು. ಅವನು ಮನಸ್ಸೆ ಮತ್ತು ಎಫ್ರಯಿಮ್‍ ಎಂಬ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.


ತಾಯಿಯ ಉದರದಿಂದಲೇ ನಪುಂಸಕರಾಗಿ ಹುಟ್ಟಿದವರಿದ್ದಾರೆ; ಜನರಿಂದ ನಪುಂಸಕರಾದವರು ಕೂಡ ಇದ್ದಾರೆ; ಸ್ವರ್ಗಸಾಮ್ರಾಜ್ಯದ ನಿಮಿತ್ತ ಅವಿವಾಹಿತರಾಗಿ ಇರುವವರೂ ಇದ್ದಾರೆ; ಇದನ್ನು ಅಂಗೀಕರಿಸಬಲ್ಲವನು ಅಂಗೀಕರಿಸಲಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು