Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ, ಸ್ವರ್ಗಸಾಮ್ರಾಜ್ಯ ಇಂಥವರದೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಯೇಸು - ಮಕ್ಕಳನ್ನು ಬಿಡಿರಿ; ನನ್ನ ಹತ್ತರ ಬರುವದಕ್ಕೆ ಅವುಗಳಿಗೆ ಅಡ್ಡಿಮಾಡಬೇಡಿರಿ; ಪರಲೋಕರಾಜ್ಯವು ಇಂಥವರದೇ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಯೇಸು, “ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿ ಮಾಡಬೇಡಿ. ಏಕೆಂದರೆ ಪರಲೋಕರಾಜ್ಯ ಈ ಚಿಕ್ಕ ಮಕ್ಕಳಂಥವರದೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಜೆಜುನ್ ತೆಂಕಾ,“ಬಾರಿಕ್ ಪೊರಾಕ್ನಿ ಮಾಜೆಕ್ಡೆ ಯೆವ್ಕ್ ಸೊಡಾ, ತೆಂಕಾ ಅಡ್ವುನಕಾಶಿ, ಕಶ್ಯಾಕ್ ಮಟ್ಲ್ಯಾರ್ ಸರ್‍ಗಾಚೆ ರಾಜ್ ಬಾರಿಕ್ ಪೊರಾಂಚ್ಯಾ ಸರ್ಕೆ ಹೊತ್ತ್ಯಾಂಚೆಚ್.” ಮಟ್ಲ್ಯಾನ್ ಅನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:14
18 ತಿಳಿವುಗಳ ಹೋಲಿಕೆ  

“ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಆದರೆ ಆತ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,’ ಎಂದು ಹೇಳಿದನು,” ಎಂದಳು.


ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ಅನಂತರ ಆಕೆ ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನು ಹಾಗೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತಂದಿದ್ದರು.


ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅವನಿಗೆ ಸುನ್ನತಿ ಮಾಡಿದನು.


ಹನ್ನಳು, “ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ,” ಎಂದು ಹೇಳಿದಳು.


“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.


ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.”


ತರುವಾಯ ಆ ಮಕ್ಕಳ ಮೇಲೆ ಕೈಯಿಟ್ಟು ಆಶೀರ್ವದಿಸಿದರು. ಬಳಿಕ ಅಲ್ಲಿಂದ ಹೊರಟುಹೋದರು.


ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು