Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:7 - ಕನ್ನಡ ಸತ್ಯವೇದವು C.L. Bible (BSI)

7 "ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ನಿಯಮಿಸಿದ್ದು ಏಕೆ?” ಎಂದು ಫರಿಸಾಯರು ಮರುಪ್ರಶ್ನೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಆತನನ್ನು - ಹಾಗಾದರೆ ತ್ಯಾಗಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಯಾಕೆ ಆಜ್ಞೆಕೊಟ್ಟನು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಫರಿಸಾಯರು, “ಹಾಗಾದರೆ ಒಬ್ಬ ಪುರುಷನು ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟು ಬಿಡಬಹುದೆಂದು ಮೋಶೆಯು ಏಕೆ ಅಪ್ಪಣೆಕೊಟ್ಟನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಫಾರಿಜೆವಾನಿ,“ತರ್ ಎಕ್ ಘೊಮನ್ಸಾನ್ ಸೊಡ್‍ ಚಿಟಿ ಲಿವ್ನ್ ದಿವ್ನ್ ಅಪ್ನಾಚ್ಯಾ ಬಾಯ್ಕೊಕ್ ಸೊಡುಕ್ ಹೊತಾ ಮನುನ್ ಮೊಯ್ಜೆನ್ ಅಪ್ನಾಚ್ಯಾ ಖಾಯ್ದ್ಯಾತ್ನಿ ಕಶ್ಯಾಕ್ ಲಿವ್ನ್ ಥವ್ಲ್ಯಾನಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:7
9 ತಿಳಿವುಗಳ ಹೋಲಿಕೆ  

“ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ವಿವಾಹ ವಿಚ್ಛೇದನ ಪತ್ರವನ್ನು ಅವಳಿಗೆ ಕೊಡಲಿ,’ ಎಂದು ವಿಧಿಸಲಾಗಿದೆ.


ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿ ಇತ್ತಿದ್ದಾನೆ,” ಎಂದರು.


ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆ ಹೇಳುತ್ತಾರೆ: “ವಿವಾಹ ವಿಚ್ಛೇದನವನ್ನು ದ್ವೇಷಿಸುತ್ತೇನೆ. ತನ್ನ ಮಡದಿಗೆ ನಂಬಿಕೆದ್ರೋಹವನ್ನೆಸಗುವವನನ್ನು ಹಾಗು ದೌರ್ಜನ್ಯ ತೋರುವವನನ್ನು ಹಗೆಮಾಡುತ್ತೇನೆ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಆದಕಾರಣ ಮನಃಪೂರ್ವಕವಾಗಿ ಎಚ್ಚರಿಕೆಯಿಂದಿರಿ ನಿಮ್ಮ ಮಡದಿಗೆ ದ್ರೋಹವೆಸಗದಿರಿ.


ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.


ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಹೀಗಿರುವಲ್ಲಿ, ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರವಾಗಿರುವರು. ಈ ನಿಮಿತ್ತ ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದೆ ಇರಲಿ,” ಎಂದರು.


“ನಿಮ್ಮ ಹೆಂಡತಿಯನ್ನು ನೀವು ಬಿಟ್ಟುಬಿಡಬಹುದೆಂದು ಮೋಶೆ ಅನುಮತಿ ಇತ್ತದ್ದು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತದಿಂದಲೇ. ಆದರೆ ಅದು ಆದಿಯಿಂದಲೇ ಹಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು