Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಹೆರೋದನು ಆ ಜ್ಯೋತಿಷಿಗಳನ್ನು ಗೋಪ್ಯವಾಗಿ ಬರಮಾಡಿಕೊಂಡು ಅವರಿಗೆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸ್ಪಷ್ಟವಾಗಿ ಕೇಳಿ ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜೋಯಿಸರನ್ನು ಕರೆಸಿ ಆ ನಕ್ಷತ್ರವು ಕಾಣಿಸಿದ ಕಾಲವನ್ನು ಅವರ ಕಡೆಯಿಂದ ಚೆನ್ನಾಗಿ ತಿಳುಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಹೆರೋದನು ಪೂರ್ವ ದೇಶದ ಜ್ಞಾನಿಗಳನ್ನು ರಹಸ್ಯವಾಗಿ ಕರೆಯಿಸಿ, ಅವರು ಆ ನಕ್ಷತ್ರವನ್ನು ಕಂಡ ಸರಿಯಾದ ಸಮಯವನ್ನು ಅವರಿಂದ ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಹೆರೋದನು ಆ ಜ್ಞಾನಿಗಳನ್ನು ರಹಸ್ಯವಾಗಿ ಕರೆದು, ಆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸೂಕ್ಷ್ಮವಾಗಿ ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಹೆರೊದ್ ರಾಜಾನ್ ತ್ಯಾ ಭೆಟುಕ್ ಯೆಲ್ಲ್ಯಾಕ್ನಿ ಕಡೆಕ್ ಬಲ್ವುನ್ ಘುಟಾನ್ ತೆ ಚಿಕ್ಕಿ ದಿಸಲ್ಲೊ ಎಳ್ ಇಚಾರುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:7
16 ತಿಳಿವುಗಳ ಹೋಲಿಕೆ  

ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


“ಇವಳನ್ನು ಅವನಿಗೆ ಕೊಡುತ್ತೇನೆ. ಈಕೆ ಅವನಿಗೆ ಉರುಲಾಗಿರಬಲ್ಲಳು; ಫಿಲಿಷ್ಟಿಯರ ಕೈಗೆ ಇವನು ಸಿಕ್ಕಿಬೀಳುವಂತೆ ಮಾಡಬಲ್ಲಳು,” ಎಂದುಕೊಂಡನು. ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೇ ಸಂದರ್ಭ ಬಂದೊದಗಿದೆ,” ಎಂದು ಹೇಳಿದನು.


ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು.


ಆ ಘಟಸರ್ಪ ತನ್ನ ಬಾಯಿಂದ ನೀರನ್ನು ನದಿಯಂತೆ ಸುರಿಸುತ್ತಾ ಅದರಲ್ಲಿ ಆ ಮಹಿಳೆಯನ್ನು ಕೊಚ್ಚಿಕೊಂಡು ಹೋಗುವಂತೆ ಮಾಡಲು ಯತ್ನಿಸಿತು.


ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, “ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು,” ಎಂದು ಹೇಳಿದನು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಕ್ರಿಸ್ತಮಾರ್ಗದ ಬಗ್ಗೆ ಚೆನ್ನಾಗಿ ಅರಿತುಕೊಂಡಿದ್ದ ಫೆಲಿಕ್ಸನು, “ಸಹಾಸ್ರಾಧಿಪತಿ ಲೂಸಿಯನು ಬಂದ ಮೇಲೆ ನಾನು ಈ ವ್ಯಾಜ್ಯವನ್ನು ತೀರ್ಮಾನಿಸುತ್ತೇನೆ,” ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು