Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:12 - ಕನ್ನಡ ಸತ್ಯವೇದವು C.L. Bible (BSI)

12 ‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಡೆಗೆ ಬಂದ ಇವರು ಒಂದು ತಾಸು ಹೊತ್ತು ಮಾತ್ರ ಕೆಲಸ ಮಾಡಿದ್ದಾರೆ; ನಾವು ದಿನವೆಲ್ಲಾ ಬಿಸಲಿನಲ್ಲಿ ಕೆಲಸ ಮಾಡಿ ಕಷ್ಟಪಟ್ಟಿದ್ದೇವೆ; ಇವರನ್ನು ನಮಗೆ ಸಮಮಾಡಿದ್ದೀಯೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ‘ಕಡೆಯವರಾದ ಇವರು ಒಂದೇ ತಾಸು ಕೆಲಸಮಾಡಿದ್ದಾರೆ, ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸಮಾಡಿದ ನಮ್ಮನ್ನು ನೀನು ಇವರಿಗೆ ಸಮಮಾಡಿದ್ದಿ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ಅಮಿ ಸಕ್ಕಾಳ್ಚ್ಯಾನ್ ನಿಂಬ್ರಾತ್ ಅನಿ ಗರ್‍ಮಿತ್ ಕಾಮ್ ಕರ್ಲಾಂವ್, ಅನಿ ಹೆನಿ ಖಾಲಿ ಎಕುಚ್ ಎಕ್ ತಾಸ್ ಕಾಮ್ ಕರ್‍ಲ್ಯಾನಾತ್ ತೆಕಾಬಿ ಅಮ್ಕಾಬಿ ತವ್ಡಿಚ್ ಮಜುರಿ ದಿಲೆ”. ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:12
20 ತಿಳಿವುಗಳ ಹೋಲಿಕೆ  

ದಕ್ಷಿಣ ದಿಕ್ಕಿನ ಗಾಳಿ ಬೀಸಿದಾಗ ಉರಿಬಿಸಿಲು ಎನ್ನುತ್ತೀರಿ; ಅಂತೆಯೇ ಇರುತ್ತದೆ.


ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.


ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.


ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ.


ಯೆಹೂದ್ಯರನ್ನು ಅವರ ವಿಶ್ವಾಸದ ಆಧಾರದ ಮೇಲೂ ಇತರರನ್ನು ಅವರ ವಿಶ್ವಾಸದ ಮೂಲಕವೂ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವ ದೇವರು ಒಬ್ಬರೇ.


ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು.


ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?


ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.


ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು