Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:15 - ಕನ್ನಡ ಸತ್ಯವೇದವು C.L. Bible (BSI)

15 ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಸ್ವಂತ ಹಣವನ್ನು ನನಗೆ ಇಷ್ಟಬಂದ ಹಾಗೆ ನಾನು ಕೊಡಬಹುದಲ್ಲವೇ? ನಾನು ಅವರಿಗೆ ಒಳ್ಳೆಯದನ್ನು ಮಾಡಿದ್ದಕ್ಕಾಗಿ ನೀನು ಹೊಟ್ಟೆಕಿಚ್ಚುಪಡುವೆಯಾ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಾಜೆ ಸ್ವತಾಚೆ ಪೈಸೆ ಮಿಯಾ ಮಾಕಾ ಪಾಜೆ ತಸೆ ಕರುಕ್ ಮಾಕಾ ಹಕ್ಕ್ ನಾ ಕಾಯ್? ಅನಿ ಎಕ್ಲ್ಯಾಕ್ ಬರೆ ಕರ್‍ತಲೆ ಬಗುನ್ ಪೊಟಾತ್ ಜಳುಲಾ ಕಾಯ್‍? ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:15
24 ತಿಳಿವುಗಳ ಹೋಲಿಕೆ  

ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.


ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ.


ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!”


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಹಿಂದೊಮ್ಮೆ ನೀವು ಆಧ್ಯಾತ್ಮಿಕವಾಗಿ ಮೃತರಾಗಿದ್ದಿರಿ.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ.


ಜಿಪುಣ ದೃಷ್ಟಿಯವನು ಬಡಿಸುವ ಅನ್ನವನ್ನು ಉಣಬೇಡ; ಅವನ ರುಚಿಪದಾರ್ಥಗಳನ್ನು ಬಯಸಬೇಡ.


ಶತ್ರುಗಳು ನಿಮ್ಮ ಪಟ್ಟಣಗಳಿಗೆಲ್ಲಾ ಮುತ್ತಿಗೆ ಹಾಕಿ, ನಿಮ್ಮನ್ನು ಭೀಕರವಾದ ಬಿಕ್ಕಟ್ಟಿಗೆ ಸಿಕ್ಕಿಸುವರು. ಆಗ ನಿಮ್ಮಲ್ಲಿ ಮೃದುಸ್ವಭಾವಿ ಹಾಗು ಅತಿ ಸುಕುಮಾರ ಆದವನೂ ಕೂಡ ತನಗೇ ತಿನ್ನಲಿಕ್ಕೆ ಏನೂ ಉಳಿಯದೆ, ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು, ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಸಿಂಡರಿಸಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.


ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).


“ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ.


ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು