Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:26 - ಕನ್ನಡ ಸತ್ಯವೇದವು C.L. Bible (BSI)

26 ಇದು ನಿಮಗೆ ಗೊತ್ತು. ನೀವು ಹಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿಮ್ಮಲ್ಲಿ ಹಾಗಿರಬಾರದು; ಆದರೆ ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ನೀವು ಹಾಗೆ ಮಾಡಬಾರದು. ನಿಮ್ಮಲ್ಲಿ ದೊಡ್ಡವನಾಗಲು ಇಚ್ಫಿಸುವವನು ಸೇವಕನಂತೆ ಸೇವೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಖರೆ ತುಮ್ಚ್ಯಾ ಮದ್ದಿ ತಸೆ ಹೊವ್ಚೆ ನ್ಹಯ್, ಜರ್ ತುಮ್ಚ್ಯಾತ್ಲೊ ಕೊನ್‍ಬಿ ಮೊಟೊ ಹೊವ್ಚೆ ಮನುನ್ ಯವಜ್ತಾ, ತೆನಿ ಹುರಲ್ಲ್ಯಾ ಸಗ್ಳ್ಯಾಂಚೊ ಸೆವಕ್ ಹೊವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:26
23 ತಿಳಿವುಗಳ ಹೋಲಿಕೆ  

ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ;;


ನರಪುತ್ರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಬೋಧಿಸಿದರು.


ಯೇಸು ಕುಳಿತುಕೊಂಡು, ಹನ್ನೆರಡು ಮಂದಿಯನ್ನೂ ಕರೆದು, ಅವರಿಗೆ, ‘ನಿಮ್ಮಲ್ಲಿ ಮೊದಲಿಗನಾಗ ಬಯಸುವವನು ಎಲ್ಲರಿಗೂ ಕಡೆಯವನಾಗಿರಲಿ; ಎಲ್ಲರ ಸೇವೆ ಮಾಡುವವನಾಗಿ ಇರಲಿ,’ ಎಂದರು.


ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ.


“ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು.


ಅಂತಿಮ ದಿನದಂದು ಪ್ರಭು ಯೇಸು ಆತನಿಗೆ ಕರುಣೆತೋರಲಿ. ನಾನು ಏಷ್ಯಾದಲ್ಲಿದ್ದಾಗ ಆತನು ನನಗೆ ಎಷ್ಟೊಂದು ನೆರವು ನೀಡಿದನೆಂದು ನಿನಗೆ ಚೆನ್ನಾಗಿ ತಿಳಿದಿದೆ.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.


ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.


ಅದಕ್ಕೆ ಯೇಸು, “ನನ್ನ ಸಾಮ್ರಾಜ್ಯ ಈ ಲೋಕದ್ದಲ್ಲ, ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ,” ಎಂದರು.


ಯೇಸುವನ್ನು ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಹಾಗೂ ಅವರ ಸೇವೆಮಾಡಿದ ಮಹಿಳೆಯರೂ ಅಲ್ಲಿದ್ದರು. ಅವರು ಇದೆಲ್ಲವನ್ನು ದೂರದಿಂದ ನೋಡುತ್ತಾ ಇದ್ದರು.


ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ.


ಆದರೆ ನೀವು ಹಾಗಾಗಬಾರದು; ನಿಮ್ಮಲ್ಲಿ ಅತಿ ದೊಡ್ಡವನು ಅತಿ ಚಿಕ್ಕವನಂತಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು