Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:10 - ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಯೇಸು ಜೆರುಸಲೇಮನ್ನು ಪ್ರವೇಶಿಸಿದಾಗ ನಗರಕ್ಕೆ ನಗರವೇ ಕಲಕಲಗೊಂಡಿತು. ಜನರು “ಯಾರಿವರು?” ಎಂದು ವಿಚಾರಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, “ಈತನು ಯಾರು?” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ಯೆರೂಸಲೇಮನ್ನು ಸೇರಲು ಪಟ್ಟಣವೆಲ್ಲಾ ಗದ್ದಲವಾಗಿ, ಈತನು ಯಾರು? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಳಿಕ ಯೇಸು ಜೆರುಸಲೇಮಿನೊಳಗೆ ಹೋದನು. ಪಟ್ಟಣದಲ್ಲಿದ್ದ ಜನರೆಲ್ಲ ಗಲಿಬಿಲಿಗೊಂಡರು. ಅವರು, “ಈ ಮನುಷ್ಯನು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆರೂಸಲೇಮಿಗೆ ಪ್ರವೇಶಿಸಿದಾಗ, ಪಟ್ಟಣದಲ್ಲಿ ಕೋಲಾಹಲವುಂಟಾಗಿ, “ಇವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜು ಜೆರುಜಲೆಮಾತ್ ಭುತ್ತುರ್ ಗುಸಲ್ಲ್ಯಾ ತನ್ನಾ ಸಗ್ಳೆ ಶಾರ್ ಅವಾಜಾನ್ ಹಾಲುಲಾಗಲ್ಲೆ. ಅನಿ ಲೊಕಾನಿ “ ಹ್ಯೊ ಕೊನ್ ” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:10
14 ತಿಳಿವುಗಳ ಹೋಲಿಕೆ  

ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.


ಹೆರೋದನಾದರೋ, ‘ಯೊವಾನ್ನನೇ! ಅವನನ್ನು ನಾನೇ ಶಿರಚ್ಛೇದನ ಮಾಡಿಸಿದೆನಲ್ಲಾ; ಮತ್ತೆ ಇವನಾರು? ಇವನ ಬಗ್ಗೆ ಇಂಥಾ ವಿಷಯಗಳನ್ನೆಲ್ಲ ಕೇಳುತ್ತಾ ಇರುವೆನಲ್ಲಾ!’ ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು.


ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರು ಇದನ್ನು ಕೇಳಿ, “ಪಾಪಗಳನ್ನು ಕೂಡ ಕ್ಷಮಿಸುವ ಈತ ಯಾರು?” ಎಂದು ತಮ್ಮತಮ್ಮಲ್ಲೇ ಹೇಳಿಕೊಂಡರು.


ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು.


“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು".


ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?


ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?’ ಎಂದು ಕೇಳಿದರು. ಅವನು,


ಹಾಗೆಯೇ ಪ್ರಯಾಣವನ್ನು ಮುಂದುವರೆಸಿ ಅವರಿಬ್ಬರೂ ಬೆತ್ಲೆಹೇಮನ್ನು ತಲುಪಿದರು. ಅವರು ಊರಿಗೆ ಹಿಂದಿರುಗಿ ಬಂದ ಸಂಗತಿ ಜನರಲ್ಲಿ ಕುತೂಹಲ ಮೂಡಿಸಿತು. ಊರಿನ ಹೆಂಗಸರು, “ಈಕೆ ನವೊಮಿಯಲ್ಲವೇ?” ಎಂದು ವಿಚಾರಿಸತೊಡಗಿದರು.


ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು.


“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು? ನಮಗೆ ತಿಳಿಸು,” ಎಂದು ಕೇಳಿದರು.


ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


“ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು