Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:12 - ಕನ್ನಡ ಸತ್ಯವೇದವು C.L. Bible (BSI)

12 ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋದರು. ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು. ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬಳಿಕ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ದೇವಾಲಯದ ಒಳಕ್ಕೆ ಹೋದನು. ಅಲ್ಲಿ ಮಾರುತ್ತಿದ್ದ ಮತ್ತು ಕೊಂಡುಕೊಳ್ಳುತ್ತಿದ್ದ ಜನರನ್ನೆಲ್ಲಾ ಆತನು ಹೊರಗೆ ಓಡಿಸಿಬಿಟ್ಟನು; ನಾಣ್ಯ ವಿನಿಮಯ ಮಾಡುತ್ತಿದ್ದವರ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜು ದೆವಾಚ್ಯಾ ಗುಡಿಚ್ಯಾ ದಾರಾತ್ ಗೆಲೊ ಅನಿ ಇಕ್ತಲೆ, ಇಕಾತ್ ಘೆತಲೆ ಕರ್‍ತಲ್ಯಾಕ್ನಿ ಭಾಯ್ರ್ ಘಾಟ್ಲ್ಯಾನ್. ಪೈಸ್ಯಾಂಚೊ ಯಾವಾರ್ ಕರ್‍ತಲ್ಯಾಂಚಿ ಮೆಜಾ ತೆನಿ ಪಾಡ್ವುನ್ ಘಾಟ್ಲ್ಯಾನ್ ಅನಿ ಪಾರಿವಾಳಾ ಇಕ್ತಲ್ಯಾಂಚ್ಯಾ ಕುರ್‍ಚಿಯಾಬಿ ಪಾಡ್ವುನ್ ಘಾಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:12
18 ತಿಳಿವುಗಳ ಹೋಲಿಕೆ  

ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿ ಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಿರಲಿ, ಅಥವಾ ಮರಿ ಪಾರಿವಾಳ ಆಗಿರಲಿ.


“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.


ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು.


ಬಡತನದ ನಿಮಿತ್ತ ಕುರಿಯನ್ನು ಕೊಡುವುದಕ್ಕೆ ಆಗದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತಂದು ದಹನಬಲಿಗಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಒಂದನ್ನು ಸಮರ್ಪಿಸಬೇಕು. ಯಾಜಕನು ಅವಳ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಆಕೆ ಶುದ್ಧಳಾಗುವಳು.


ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಮತ್ತೊಂದನ್ನೂ ಸಮರ್ಪಿಸಬೇಕು.


ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನು ನನಗೆ ಅರ್ಧ ಶೆಕೆಲ್‍ ನಾಣ್ಯದ ಮೇರೆಗೆ ತೆರಿಗೆ ಕಟ್ಟಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಅರ್ಧರ್ಧ ನಾಣ್ಯವನ್ನು ತೆರಿಗೆಯಾಗಿ ಕೊಡಬೇಕು.


ಯೇಸು ಜೆರುಸಲೇಮನ್ನು ಸೇರಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ನಡೆಯುತ್ತಿದ್ದ ಎಲ್ಲವನ್ನೂ ನೋಡುವಷ್ಟರಲ್ಲಿ ಕತ್ತಲಾಗುತ್ತಾ ಬಂದಿತು; ಆದುದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು, ಅವರು ಬೆಥಾನಿಯಕ್ಕೆ ಹೊರಟುಹೋದರು.


ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳಲ್ಲಿಯಾಗಲಿ


ಗಂಡುಮಗುವನ್ನು ಹೆತ್ತರೂ ಹೆಣ್ಣುಮಗುವನ್ನು ಹೆತ್ತರೂ ಆಕೆಯ ಶುದ್ಧೀಕರಣ ದಿನಗಳು ಮುಗಿದಾಗ ಆಕೆ ದಹನಬಲಿಗಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಒಂದು ಮರಿ ಪಾರಿವಾಳವನ್ನು, ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.


ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.


ಎಂಟನೆಯ ದಿನ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.


“ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿ ಪಾರಿವಾಳಗಳನ್ನಾಗಲಿ ಕೊಡಲು ಅವನಿಂದ ಆಗದೆ ಹೋದಲ್ಲಿ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿ ಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆ ಹೊಯ್ಯಕೂಡದು, ಸಾಂಬ್ರಾಣಿಯನ್ನು ಇಡಕೂಡದು.


ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು