Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:19 - ಕನ್ನಡ ಸತ್ಯವೇದವು C.L. Bible (BSI)

19 ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣದೆ ಅದಕ್ಕೆ - ಇನ್ನು ಮೇಲೆ ನಿನ್ನಲ್ಲಿ ಫಲವು ಎಂದೆಂದಿಗೂ ಆಗದೆಹೋಗಲಿ ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಆ ಕೂಡಲೇ ಅಂಜೂರದ ಮರ ಒಣಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ರಸ್ತ್ಯಾಚ್ಯಾ ಬಾಜುಕ್ ಹೊತ್ತೆ ಅಂಜುರಾಚೆ ಝಾಡ್ ತೆನಿ ಬಗಟ್ಲ್ಯಾನ್. ಅನಿ ತೊ ತ್ಯಾ ಝಾಡಾಕ್ಡೆ ಹನ್ನಾ ಖಾವ್ಕ್ ಗೆಲೊ. ಖರೆ ತ್ಯಾ ಝಾಡಾಕ್ ಪಾನಾ ಸೊಡುನ್ ಎಕ್ ಸೈತ್ ಹನ್ನ್ ತೆಕಾ ಗಾವುಕ್ನಾ. ತೆಚೆಸಾಟ್ನಿ ತೆನಿ ತ್ಯಾ ಝಾಡಾಕ್,“ಅನಿ ಫಿಡೆ ತುಕಾ ಕನ್ನಾಬಿ ಫಳಾ ಹೊಯ್‍ನಸ್ತಾನಾ ರ್‍ಹಾಂವ್ದಿತ್.” ಮಟ್ಲ್ಯಾನ್. ತನ್ನಾ ತೆ ಅಂಜುರಾಚೆ ಝಾಡ್ ವಾಳುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:19
17 ತಿಳಿವುಗಳ ಹೋಲಿಕೆ  

ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು,” ಎಂದನು.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ಯೇಸು ಆ ಮರಕ್ಕೆ, “ಇನ್ನು ಮುಂದೆ ನಿನ್ನ ಹಣ್ಣನ್ನು ಯಾರೂ ಎಂದಿಗೂ ತಿನ್ನದಂತಾಗಲಿ,” ಎಂದರು. ಶಿಷ್ಯರು ಈ ಮಾತುಗಳನ್ನು ಕೇಳಿಸಿಕೊಂಡರು.


ಅಕ್ರಮಿಯು ತನ್ನ ಅಕ್ರಮವನ್ನು ಮುಂದುವರೆಸಲಿ. ಅಶುದ್ಧನು ತನ್ನ ಅಶುದ್ಧತೆಯಲ್ಲಿ ಮುಂದುವರೆಯಲಿ. ಸಜ್ಜನನು ತನ್ನ ಸನ್ನಡತೆಯಲ್ಲಿಯೇ ನಿರತನಾಗಿರಲಿ. ಪವಿತ್ರನು ತನ್ನ ಪಾವಿತ್ರ್ಯತೆಯನ್ನು ಹೆಚ್ಚಿಸಿಕೊಳ್ಳಲಿ,” ಎಂದನು.


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ.


ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು !


“ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಇದನ್ನು ನೋಡಿ ಶಿಷ್ಯರು ನಿಬ್ಬೆರಗಾದರು. “ಈ ಅಂಜೂರದ ಮರ ಇಷ್ಟು ಬೇಗನೆ ಹೇಗೆ ಒಣಗಿಹೋಯಿತು?” ಎಂದು ಕೇಳಿದರು.


ಬೆಳಿಗ್ಗೆ ಅವರೆಲ್ಲರೂ ಅದೇ ಮಾರ್ಗವಾಗಿ ಹಿಂದಿರುಗುವಾಗ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು