Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:21 - ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ: ನೀವು ಸಂಶಯಪಡದೆ ವಿಶ್ವಾಸಿಸಿದರೆ ಈ ಅಂಜೂರದ ಮರಕ್ಕೆ ನಾನು ಏನು ಮಾಡಿದೆನೋ ನೀವೂ ಅಂತೆಯೇ ಮಾಡುವಿರಿ; ಅದು ಮಾತ್ರವಲ್ಲ, ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ನೀವು ಹೇಳಿದರೆ, ಅದು ಹಾಗೆಯೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಕ್ಕೆ ಯೇಸು - ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ನಾನು ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ. ಇದು ಮಾತ್ರವಲ್ಲದೆ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೆ ಅದೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಸಂಶಯಪಡದೆ ನಂಬಿದರೆ ನಾನು ಈ ಮರಕ್ಕೆ ಮಾಡಿದಂತೆ ನೀವೂ ಮಾಡಲು ಸಾಧ್ಯ. ಅಲ್ಲದೆ ಇನ್ನೂ ಹೆಚ್ಚಾಗಿ ಮಾಡಲು ಸಾಧ್ಯ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಪೂರ್ಣ ನಂಬಿಕೆಯಿಂದ ಹೇಳಿದರೆ ಅಂತೆಯೇ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜುನ್ ತೆಂಕಾ,“ ಮಿಯಾ ತುಮ್ಕಾ ಖರೆಚ್ ಸಾಂಗ್ತಾ. ಮನಾತ್ ಸಂಶೆವ್ ಕರಿನಸ್ತಾನಾ ತುಮಿ ವಿಶ್ವಾಸ್ ಕರ್ಲ್ಯಾರ್, ಮಿಯಾ ಹ್ಯಾ ಅಂಜುರಾಚ್ಯಾ ಝಾಡಾಕ್ ಕರ್ಲ್ಯಾ ಸರ್ಕೆ ತುಮಿಬಿ ಕರುಕ್ ಹೊತಾ. ಅನಿ ಎವ್ಡೆಚ್ ನ್ಹಯ್ ತುಮಿ ಎಕ್ ಮಡ್ಡಿಕ್ ಉಟ್ ಅನಿ ಸಮುಂದರಾತ್ ಜಾವ್ನ್ ಪಡ್. ಮನುನ್ ಸಾಂಗ್ಲ್ಯಾರ್ ತುಮಿ ಸಾಂಗಲ್ಲ್ಯಾ ಸರ್ಕೆಚ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:21
9 ತಿಳಿವುಗಳ ಹೋಲಿಕೆ  

ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಇದನ್ನು ನೋಡಿ ಶಿಷ್ಯರು ನಿಬ್ಬೆರಗಾದರು. “ಈ ಅಂಜೂರದ ಮರ ಇಷ್ಟು ಬೇಗನೆ ಹೇಗೆ ಒಣಗಿಹೋಯಿತು?” ಎಂದು ಕೇಳಿದರು.


ಪೇತ್ರನು ದೋಣಿಯನ್ನು ಬಿಟ್ಟು ನೀರಿನ ಮೇಲೆ ನಡೆಯುತ್ತಾ ಯೇಸುವಿನತ್ತ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು