Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:26 - ಕನ್ನಡ ಸತ್ಯವೇದವು C.L. Bible (BSI)

26 ಅದಕ್ಕೆ ಅವರು ತಮ್ಮತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮನುಷ್ಯರಿಂದ ಬಂತೆಂದು ಹೇಳಿದರೆ ನಮಗೆ ಜನರ ಭಯವದೆ; ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸಿದ್ದಾರಲ್ಲಾ ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅನಿ ಅಮಿ ಮಾನ್ಸಾಕ್ನಾ ಮನುನ್ ಸಾಂಗ್ಲಾಂವ್ ತರ್ ಲೊಕಾ ಅಮ್ಕಾ ಕಾಯ್ ಕರ್‍ತ್ಯಾತ್ ಕಾಯ್ಕಿ ಮಟ್ಲ್ಯಾನಿ ಅನಿ ತೆನಿ ಲೊಕಾಕ್ನಿ ಭಿಂಯಾಲೆ. ಕಶ್ಯಾಕ್ ಮಟ್ಲ್ಯಾರ್ ಲೊಕಾ ಜುವಾಂವ್ ಎಕ್ ಪ್ರವಾದಿ ಮನುನ್ ಮಾನಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:26
17 ತಿಳಿವುಗಳ ಹೋಲಿಕೆ  

ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.


ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.


ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು.


ಹಾಗಾದರೆ ಯಾವ ಉದ್ದೇಶದಿಂದ ಹೋದಿರಿ? ಪ್ರವಾದಿಯನ್ನು ನೋಡಲೆಂದೋ ಹೌದು ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ ಎಂಬುದು ನಿಜ.


ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.


ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.


ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.


ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.


ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.


‘ಮನುಷ್ಯರಿಂದ ಬಂದಿತು’ ಎಂದು ಹೇಳೋಣ ಎಂದರೆ ಅದೂ ಆಗದು,” ಎಂದುಕೊಂಡರು. ಯೊವಾನ್ನನು ನಿಜವಾದ ಪ್ರವಾದಿಯೆಂದು ಸರ್ವರು ನಂಬಿದ್ದರಿಂದ ಅವರಿಗೆ ಜನರ ಭಯವಿತ್ತು.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


“ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು.


'ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?’ “ ಎಂದು ಕೇಳಿದರು.


ಬಳಿಕ ಬಂದು, “ನಮಗೆ ಗೊತ್ತಿಲ್ಲ,” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು, “ಹಾಗಾದರೆ, ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು