Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:27 - ಕನ್ನಡ ಸತ್ಯವೇದವು C.L. Bible (BSI)

27 ಬಳಿಕ ಬಂದು, “ನಮಗೆ ಗೊತ್ತಿಲ್ಲ,” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು, “ಹಾಗಾದರೆ, ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕಡೆಗೆ ಅವರು - ನಾವರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ - ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಅವರು, “ಯೋಹಾನನಿಗೆ ಎಲ್ಲಿಂದ ಅಧಿಕಾರ ಬಂದಿತೋ ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಆಗ ಯೇಸು, “ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆ ಎಂಬುದನ್ನು ನಾನು ಸಹ ನಿಮಗೆ ಹೇಳುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ತರುವಾಯ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದರು. ಅದಕ್ಕೆ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೆಚೆಸಾಟ್ನಿ ತೆನಿ ಜೆಜುಕ್, ಅಮ್ಕಾ ಗೊತ್ತ್ ನಾ ಮನುನ್ ಜಬಾಬ್ ದಿಲ್ಯಾನಿ, ತನ್ನಾ ಜೆಜುನ್ ತೆಂಕಾ,“ತಸೆ ಜಾಲ್ಯಾರ್ ಮಿಯಾಬಿ ಕಸ್ಲ್ಯಾ ಹಕ್ಕಾನಿ ಹೆ ಸಗ್ಳೆ ಕರುಕ್ ಲಾಗ್ಲಾ ಮನುನ್ ತುಮ್ಕಾ ಸಾಂಗಿನಾ”. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:27
19 ತಿಳಿವುಗಳ ಹೋಲಿಕೆ  

ನಾವು ಪ್ರಚಾರಮಾಡುವ ಶುಭಸಂದೇಶ ಕೆಲವರಿಗೆ ಇನ್ನೂ ಮುಸುಕಿನ ಮರೆಯಾಗಿದ್ದರೆ, ಹಾಗಿರುವುದು ವಿನಾಶ ಮಾರ್ಗದಲ್ಲಿರುವವರಿಗೆ ಮಾತ್ರ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಅದಕ್ಕೆ ಆ ಕುರುಡ, “ಏನಾಶ್ಚರ್ಯ! ನನಗೆ ಕಣ್ಣು ಬರಿಸಿದ್ದಾರೆ. ಆದರೂ ‘ಅವನು ಎಲ್ಲಿಯವನೋ ನಾವರಿಯೆವು’ ಎನ್ನುತ್ತೀರಿ.


ಆಕಾಶದಲ್ಲಿ ಕಾಣುವ ಲಕ್ಷಣಗಳನ್ನು ನೀವು ಅರ್ಥಮಾಡಿಕೊಳ್ಳಬಲ್ಲಿರಿ; ಆದರೆ ಈಗಿನ ಕಾಲದ ಲಕ್ಷಣಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮಿಂದಾಗದು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಇವರು ನನ್ನನ್ನು ಕುರಿತು : “ಇವನ ಜ್ಞಾನೋಪದೇಶ ಯಾರಿಗೆ? ಇವನು ಸಾರುವ ಸಂದೇಶ ಯಾರಿಗೆ? ಮೊಲೆಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ಅದಕ್ಕೆ ಅವರು ತಮ್ಮತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ,” ಎಂದುಕೊಂಡರು.


“ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು