Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:10 - ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ ಅವರು ಹೋಗಿ ಯೋಗ್ಯರು, ಅಯೋಗ್ಯರೆನ್ನದೆ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುತಂದರು. ವಿವಾಹ ಮಂಟಪ ಅತಿಥಿಗಳಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಆಳುಗಳು ಹಾದಿಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರು ಅನ್ನದೆ ಕಂಡವರನ್ನೆಲ್ಲಾ ಕೂಡಿಸಿ ಕರಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಂತೆಯೇ ಸೇವಕರು ಬೀದಿಬೀದಿಗಳಿಗೆ ಹೋಗಿ ತಾವು ಕಂಡ ಜನರನ್ನೆಲ್ಲಾ ಒಳ್ಳೆಯವರು, ಕೆಟ್ಟವರು ಎನ್ನದೆ ಒಟ್ಟುಗೂಡಿಸಿ ಊಟ ಸಿದ್ಧವಾಗಿದ್ದ ಸ್ಥಳಕ್ಕೆ ಕರೆತಂದರು. ಆ ಸ್ಥಳವು ಜನರಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆ ಸೇವಕರು ಮುಖ್ಯ ಬೀದಿಗಳಿಗೆ ಹೋಗಿ ತಾವು ಕಂಡ ಕೆಟ್ಟವರನ್ನೂ ಒಳ್ಳೆಯವರನ್ನೂ ಕರೆತಂದರು. ಹೀಗೆ ಮದುವೆ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಶೆ ಆಳಾ ವನಿಯಾತ್ನಿ ಗೆಲಿ, ಅನಿ ಬರ್‍ಯಾಕ್ನಿ, ಬುರ್ಶ್ಯಾಕ್ನಿ ಮನಿನಸ್ತಾನಾ ಗಾವ-ಗಾವಲ್ಲ್ಯಾ ಸಗ್ಳ್ಯಾ ಲೊಕಾಕ್ನಿ ಗೊಳಾ ಕರುನ್ ಬಲ್ವುನ್ ಹಾನ್ಲ್ಯಾನಿ. ಅಶೆ ಲಗ್ನಾಚೊ ಮಾಟವ್ ಲೊಕಾನಿ ಭರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:10
15 ತಿಳಿವುಗಳ ಹೋಲಿಕೆ  

ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.


ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು.


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.


ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು