Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:11 - ಕನ್ನಡ ಸತ್ಯವೇದವು C.L. Bible (BSI)

11 “ಆಮೇಲೆ ರಾಜನು ಅತಿಥಿಗಳನ್ನು ನೋಡಲುಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀಗೆ ಮನೆತುಂಬ ಊಟಕ್ಕೆ ಕೂತರು. ಆಮೇಲೆ ಅರಸನು ಕೂತವರನ್ನು ನೋಡುವದಕ್ಕೆ ಒಳಕ್ಕೆ ಬರಲಾಗಿ ಮದುವೇಬಟ್ಟೆಯನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆಗ ರಾಜನು ಜನರನ್ನೆಲ್ಲ ನೋಡಲು ಒಳಗೆ ಬಂದನು. ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲದ ಒಬ್ಬ ಮನುಷ್ಯನನ್ನು ರಾಜನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಅನಂತರ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದಾಗ, ಅಲ್ಲಿ ಮದುವೆಯ ವಸ್ತ್ರವಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ರಾಜಾ ಲಗ್ನಾಕ್ ಯೆಲ್ಲ್ಯಾ ಸೊಯ್ರ್ಯಾಕ್ನಿ ಬಗುಕ್ ಯೆಲೊ ತನ್ನಾ ಲಗ್ನಾಕ್ ಮನುನ್ ನೆಸ್ತಲೆ ಕಪ್ಡೆ ನೆಸುನಸಲ್ಲೊ ಎಕ್ ಮಾನುಸ್ ತೆಕಾ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:11
25 ತಿಳಿವುಗಳ ಹೋಲಿಕೆ  

ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.”


ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.


ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.”


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


ತಿರುಗಿಸು ನಮ್ಮನ್ನು ನಿನ್ನ ಕಡೆಗೆ ತಿರುಗುವೆವು ನೀನು ತಿರುಗಿಸಿದ ಹಾಗೆ. ಪ್ರಾಚೀನ ವೈಭವವನ್ನು ಮರಳಿ ದಯಪಾಲಿಸು ನಮಗೆ.


ಯೇಹುವು ವಸ್ತ್ರಾಗಾರದ ಅಧಿಪತಿಗೆ, “ಬಾಳ್ ದೇವತೆಯ ಭಕ್ತರೆಲ್ಲರಿಗೂ ಪೂಜಾವಸ್ತ್ರಗಳನ್ನು ಕೊಡು,” ಎಂದು ಆಜ್ಞಾಪಿಸಲು ಅವನು ತಂದುಕೊಟ್ಟನು.


ಅಂತೆಯೇ ಅವರು ಹೋಗಿ ಯೋಗ್ಯರು, ಅಯೋಗ್ಯರೆನ್ನದೆ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುತಂದರು. ವಿವಾಹ ಮಂಟಪ ಅತಿಥಿಗಳಿಂದ ತುಂಬಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು