Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:5 - ಕನ್ನಡ ಸತ್ಯವೇದವು C.L. Bible (BSI)

5 ಆದರೂ ಆಹ್ವಾನಿತರು ಅಲಕ್ಷ್ಯಮಾಡಿದರು. ಒಬ್ಬ ತೋಟಕ್ಕೆ ಹೊರಟುಬಿಟ್ಟ, ಇನ್ನೊಬ್ಬ ವ್ಯಾಪಾರಕ್ಕೆ ಹೊರಟುಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೆ ಅವರು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಅಂತೆಯೇ ಸೇವಕರು ಹೋಗಿ ಆ ಜನರಿಗೆ ತಿಳಿಸಿದರು. ಆದರೆ ಅವರು ಸೇವಕರ ಮಾತಿಗೆ ಕಿವಿಗೊಡಲಿಲ್ಲ. ಒಬ್ಬನು ತನ್ನ ಹೊಲದಲ್ಲಿ ಕೆಲಸ ಮಾಡಲು ಹೊರಟುಹೋದನು. ಬೇರೊಬ್ಬನು ತನ್ನ ವ್ಯಾಪಾರಕ್ಕಾಗಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಆದರೆ ಅವರು ಅದನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಬಲ್ವಲ್ಲ್ಯಾ ಸೈರ್‍ಯಾನಿ ಬಲ್ವಲ್ಲ್ಯಾಕ್ ಧ್ಯಾನುಚ್ ದಿವ್ಕನ್ಯಾತ್, ತೆನಿ ತೆಂಚ್ಯಾ-ತೆಂಚ್ಯಾ ಧಂದ್ಯಾಕ್ನಿ ತೆನಿ ಗೆಲ್ಯಾನಿ; ಎಕ್ಲೊ ಅಪ್ನಾಚ್ಯಾ ಶೆತಾಕ್ಡೆ ಗೆಲೊ, ಅನಿ ಎಕ್ಲೊ ಅಪ್ನಾಚ್ಯಾ ದುಕಾನಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:5
21 ತಿಳಿವುಗಳ ಹೋಲಿಕೆ  

ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.


ಶರೀರ ಸ್ವಭಾವದಲ್ಲೆ ಮಗ್ನರಾಗಿರುವುದರ ಪರಿಣಾಮ ಮರಣ; ಪವಿತ್ರಾತ್ಮ ಅವರಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


ಕೆಲವರಾದರೋ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದು ಪರಿಹಾಸ್ಯ ಮಾಡಿದರು.


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಆಗ ಯಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟ. ಏಸಾವನು ತಿಂದು, ಕುಡಿದು, ಎದ್ದು ಹೋದ. ಜ್ಯೇಷ್ಠತನದ ಹಕ್ಕುಬಾಧ್ಯತೆಗೆ ಏಸಾವನು ಕೊಟ್ಟ ಮರ್ಯಾದೆ ಇಷ್ಟೇ!


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ.


ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು.


ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು