Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:34 - ಕನ್ನಡ ಸತ್ಯವೇದವು C.L. Bible (BSI)

34 ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಉಪದೇಶಕರನ್ನೂ ಕಳುಹಿಸುತ್ತೇನೆ. ನೀವು ಅವರಲ್ಲಿ ಕೆಲವರನ್ನು ಕೊಲ್ಲುವಿರಿ; ಇನ್ನು ಕೆಲವರನ್ನು ಶಿಲುಬೆಗೇರಿಸುವಿರಿ; ಇತರ ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಹೊಡೆಯುವಿರಿ; ನೀವು ಅವರನ್ನು ಊರಿಂದ ಊರಿಗೆ ಅಟ್ಟಿಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದ್ದರಿಂದ ನೋಡಿರಿ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ನಿಯಮ ಬೋಧಕರನ್ನೂ ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಏರಿಸುವಿರಿ. ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಕ್ನಿ, ಬುದ್ವಂತಾಕ್ನಿ, ಅನಿ ಶಾಸ್ತರಾ ಶಿಕ್ವುತಲ್ಯಾಕ್ನಿ ಮಿಯಾ ಧಾಡುನ್ ದಿತಾ; ತುಮಿ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಜಿವಾನಿಚ್ ಮಾರ್‍ತ್ಯಾಶಿ, ಹುರಲ್ಲ್ಯಾಕ್ನಿ ಕುರ್ಸಾ ವರ್‍ತಿ ಮಾರ್‍ತ್ಯಾಶಿ, ಅನಿ ಉಲ್ಲ್ಯಾಕ್ನಿ ಸಿನಾಗೊಗಾತ್ನಿ ನ್ಹೆವ್ನ್ ಬಾರ್‍ಕೊಲಾನಿ ಮಾರ್‍ತ್ಯಾಶಿ, ಅನಿ ಎಕಾ ಗಾವಾನಿತ್ನಾ ಅನಿಎಕ್ ಗಾವಾಕ್ನಿ ತೆಂಕಾ ಪಳ್ಸುನ್ ಘಾಲ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:34
36 ತಿಳಿವುಗಳ ಹೋಲಿಕೆ  

ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;


ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.


ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.


ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು.


ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಯೊವಾನ್ನನ ಸಹೋದರ ಯಕೋಬನನ್ನು ಖಡ್ಗದಿಂದ ಕೊಲ್ಲಿಸಿದನು.


ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.


ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಸಜ್ಜನರು ಈವುದು ಜೀವಫಲ; ದುರ್ಜನರು ಪಡೆವುದು ಅಕಾಲಮರಣ.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ,ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು.


ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.


ಹೀಗೆ ಪ್ರವಾದಿಗಳನ್ನು ಕೊಲೆಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿಕೊಡುತ್ತೀರಿ.


ಆಗ ಸರ್ವೇಶ್ವರ ತನ್ನ ದಾಸರಾದ ಪ್ರವಾದಿಗಳ ಮುಖಾಂತರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು