Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:7 - ಕನ್ನಡ ಸತ್ಯವೇದವು C.L. Bible (BSI)

7 ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜನರಿಂದ ಬೋಧಕರನ್ನಿಸಿಕೊಳ್ಳುವದು, ಇವುಗಳೇ ಅವರಿಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮಾರುಕಟ್ಟೆಗಳಲ್ಲಿ ಜನರು ತಮಗೆ ಮರ್ಯಾದೆ ತೋರಿಸಬೇಕೆಂದು ಆಶಿಸುತ್ತಾರೆ; ಜನರಿಂದ ಉಪದೇಶಕರೆನಿಸಿಕೊಳ್ಳಲು ಇಷ್ಟಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ, ‘ಬೋಧಕರೇ,’ ಎಂದು ಕರೆಯಿಸಿಕೊಳ್ಳಲು ಅವರು ಇಚ್ಛಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಬಾಜಾರಾತ್ನಿ ಲೊಕಾನಿಕ್ನಾ ನಮಸ್ಕಾರ್ ಕರುನ್ ಘೆತಲೆ ಅನಿ ಗುರು ಮನುನ್ ಬಲ್ವುನ್ ಘೆತಲಿ ತೆಂಕಾ ಲೈ ಕುಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:7
19 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.)


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ).


ಜನರು ಯೇಸುಸ್ವಾಮಿಯನ್ನು ಸರೋವರದ ಆಚೆದಡದಲ್ಲಿ ಕಂಡೊಡನೆ, “ಗುರುದೇವಾ, ತಾವಿಲ್ಲಿಗೆ ಬಂದುದು ಯಾವಾಗ?” ಎಂದು ಕೇಳಿದರು.


ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು, “ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.


ಆಗ ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು.


ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.


“ಈ ಪೀಳಿಗೆಯನ್ನು ನಾನು ಯಾರಿಗೆ ಹೋಲಿಸಲಿ?


ಗುರುದ್ರೋಹಿಯಾದ ಯೂದನು ಆಗ, “ಗುರುವೇ, ಅವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಅದು ನಿನ್ನ ಬಾಯಿಂದಲೇ ಬಂದಿದೆ,” ಎಂದರು.


ಅದರಂತೆಯೇ ಅವನು ಯೇಸುಸ್ವಾಮಿಯ ಸಮೀಪಕ್ಕೆ ನೇರವಾಗಿ ಬಂದು, “ಗುರುವೇ, ನಮಸ್ಕಾರ,” ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, “ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿಹೋಗಿದೆ,” ಎಂದನು.


ಜನಸಮೂಹವು ಸಂತಸಚಿತ್ತದಿಂದ ಯೇಸುಸ್ವಾಮಿಯ ಮಾತುಗಳನ್ನು ಆಲಿಸುತ್ತಿತ್ತು. ಯೇಸು ತಮ್ಮ ಉಪದೇಶವನ್ನು ಮುಂದುವರಿಸುತ್ತಾ,


ಅದರಂತೆಯೇ ಅವನು ಅಲ್ಲಿಗೆ ಬಂದಕೂಡಲೆ ಯೇಸುವಿನ ಹತ್ತಿರಕ್ಕೆ ನೇರವಾಗಿ ಹೋಗಿ, ‘ಗುರುದೇವಾ’, ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


“ಫರಿಸಾಯರೇ ನಿಮಗೆ ಧಿಕ್ಕಾರ! ಪ್ರಾರ್ಥನಾ ಮಂದಿರಗಳಲ್ಲಿ ಪ್ರಧಾನ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅಪೇಕ್ಷಿಸುತ್ತೀರಿ.


ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.


ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು.


ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು