Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:8 - ಕನ್ನಡ ಸತ್ಯವೇದವು C.L. Bible (BSI)

8 ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ನೀವು ಬೋಧಕರನ್ನಿಸಿಕೊಳ್ಳಬೇಡಿರಿ; ಒಬ್ಬನೇ ನಿಮ್ಮ ಬೋಧಕನು, ನೀವೆಲ್ಲರು ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆದರೆ ನೀವು ಉಪದೇಶಕರೆನಿಸಿಕೊಳ್ಳಬೇಡಿ. ನೀವೆಲ್ಲರೂ ಸಹೋದರಸಹೋದರಿಯರು. ನಿಮಗೆ ಒಬ್ಬನೇ ಉಪದೇಶಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದರೆ ನೀವು, ‘ಬೋಧಕರು,’ ಎಂದು ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ನಿಮಗಿರುವ ಬೋಧಕರು ಒಬ್ಬರೇ ನೀವೆಲ್ಲರೂ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತುಮಿ ಗುರು ಮನುನ್ ಕೊನಾಕ್‍ಬಿ ಬಲ್ವುತಲೆ ನಕ್ಕೊ. ತುಮಿ ಸಗ್ಳೆ ಜಾನಾ ಎಕಾಮೆಕಾಚೆ ಭಾವ್- ಭೆನಿಯಾ ಅನಿ ತುಮ್ಚೊ ಗುರು ಎಕ್ಲೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:8
34 ತಿಳಿವುಗಳ ಹೋಲಿಕೆ  

ಸಹೋದರರೇ, ಎಲ್ಲರೂ ಬೋಧಕರಾಗಲು ಆತುರಪಡಬೇಡಿ. ಬೋಧಕರಾದ ನಾವು ಇತರರಿಗಿಂತಲೂ ತೀವ್ರವಾದ ನ್ಯಾಯವಿಚಾರಣೆಗೆ ಗುರಿಯಾಗುತ್ತೇವೆ.


ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಒಡೆಯ ಎಂದೂ ಕರೆಯಿಸಿಕೊಳ್ಳಬೇಡಿ; ಏಕೆಂದರೆ ನಿಮಗಿರುವ ಒಡೆಯ ಒಬ್ಬನೇ, ‘ಆತನೇ ಕ್ರಿಸ್ತ.’ ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ಆದರೆ ಆತನು, “ನೀನು ನನಗೆ ಅಡ್ಡಬೀಳಬೇಡ, ಪ್ರವಾದಿಗಳಾದ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಂಡು ನಡೆಯುವವರಿಗೂ ನಿನಗೂ ನಾನು ಸಹಸೇವಕನು ಮಾತ್ರ. ಆದ್ದರಿಂದ ನೀನು ದೇವರನ್ನು ಆರಾಧಿಸು,” ಎಂದು ತಿಳಿಸಿದನು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಸ್ವರ್ಗಲೋಕದಲ್ಲೂ ಭೂಲೋಕದಲ್ಲೂ ಪ್ರತಿ ಕುಟುಂಬವು ತನ್ನ ಹೆಸರನ್ನು ಪಡೆದಿರುವುದು ಅವರಿಂದಲೇ.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.


ಅದರಂತೆಯೇ ಅವನು ಯೇಸುಸ್ವಾಮಿಯ ಸಮೀಪಕ್ಕೆ ನೇರವಾಗಿ ಬಂದು, “ಗುರುವೇ, ನಮಸ್ಕಾರ,” ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.


ಗುರುದ್ರೋಹಿಯಾದ ಯೂದನು ಆಗ, “ಗುರುವೇ, ಅವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಅದು ನಿನ್ನ ಬಾಯಿಂದಲೇ ಬಂದಿದೆ,” ಎಂದರು.


ಆಗ ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು.


ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು, “ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.


ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, “ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿಹೋಗಿದೆ,” ಎಂದನು.


ಅದರಂತೆಯೇ ಅವನು ಅಲ್ಲಿಗೆ ಬಂದಕೂಡಲೆ ಯೇಸುವಿನ ಹತ್ತಿರಕ್ಕೆ ನೇರವಾಗಿ ಹೋಗಿ, ‘ಗುರುದೇವಾ’, ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.)


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.


ಜನರು ಯೇಸುಸ್ವಾಮಿಯನ್ನು ಸರೋವರದ ಆಚೆದಡದಲ್ಲಿ ಕಂಡೊಡನೆ, “ಗುರುದೇವಾ, ತಾವಿಲ್ಲಿಗೆ ಬಂದುದು ಯಾವಾಗ?” ಎಂದು ಕೇಳಿದರು.


ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು.


ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.


ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ).


ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು