Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:21 - ಕನ್ನಡ ಸತ್ಯವೇದವು C.L. Bible (BSI)

21 ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಂಥ ಸಂಕಟವು ಲೋಕ ಹುಟ್ಟಿದ್ದು ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ. ಇನ್ನು ಮೇಲೆಯೂ ಆಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕಶ್ಯಾಕ್ ಮಟ್ಲ್ಯಾರ್, ತನ್ನಾ ಯೆತಲೊ ಕಸ್ಟ್ ಲೈ ಮೊಟೊ ಕಸ್ಟ್ ತೊ. ಹ್ಯೊ ಜಗ್ ರಚಲ್ಲ್ಯಾಕ್ನಾ ಆಜ್ ಪತರ್ ಅಸ್ಲೊ ಕಸ್ಟ್ ಯೆವ್ಕ್ ನಾ. ಅನಿ ಅನಿ ಫಿಡೆಬಿ ಯೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:21
20 ತಿಳಿವುಗಳ ಹೋಲಿಕೆ  

“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ವೃದ್ಧರೇ ಕೇಳಿ: ನಾಡಿನ ನಿವಾಸಿಗಳೇ ಕಿವಿಗೊಡಿ. ನಿಮ್ಮ ಕಾಲದಲ್ಲಾಗಲೀ ನಿಮ್ಮ ಪೂರ್ವಿಕರ ಕಾಲದಲ್ಲಾಗಲೀ, ಇಂಥ ದುರ್ಘಟನೆ ಸಂಭವಿಸಿದ್ದುಂಟೇ?


“ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ನೀನು ಬಹಳ ಅಸಹ್ಯಕೃತ್ಯಗಳಲ್ಲಿ ತೊಡಗಿದ್ದರಿಂದ ನಾನು ಈವರೆಗೂ ಇನ್ನು ಮುಂದಕ್ಕೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.


ಈ ನಿಮ್ಮ ಪಲಾಯನ ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಸಂಭವಿಸದಂತೆ ಪ್ರಾರ್ಥನೆಮಾಡಿರಿ.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಆಗ ಮಿಂಚು, ಗುಡುಗು, ಗರ್ಜನೆಗಳುಂಟಾದವು. ಇದಲ್ಲದೆ, ಭಯಂಕರವಾದ ಭೂಕಂಪ ಉಂಟಾಯಿತು. ಮಾನವ ಇತಿಹಾಸದಲ್ಲೇ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು