Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:5 - ಕನ್ನಡ ಸತ್ಯವೇದವು C.L. Bible (BSI)

5 ಅನೇಕರು ‘ನಾನೇ ಕ್ರಿಸ್ತ, ನಾನೇ ಕ್ರಿಸ್ತ,’ ಎನ್ನುತ್ತಾ ನನ್ನ ಹೆಸರನ್ನೇ ಹೇಳಿಕೊಂಡು ಬರುವರು. ಮಾತ್ರವಲ್ಲ, ಎಷ್ಟೋ ಜನರನ್ನು ತಪ್ಪುದಾರಿಗೆಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು - ನಾನು ಕ್ರಿಸ್ತನು, ನಾನು ಕ್ರಿಸ್ತನು ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಲೈ ಲೊಕಾ ಮಾಜ್ಯಾ ವಿಶಯಾತ್ ಬೊಲ್ತ್ಯಾತ್ ಅನಿ ಮಾಜ್ಯಾ ನಾವಾನ್ ಯೆತಾತ್ ಅನಿ “ಮಿಯಾಚ್ ಕ್ರಿಸ್ತ್!” ಮನುನ್ ಸಾಂಗುನ್ ಲೈ ಲೊಕಾಕ್ನಿ ತೆನಿ ಚುಕ್ ವಾಟೆಕ್ ನ್ಹೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:5
15 ತಿಳಿವುಗಳ ಹೋಲಿಕೆ  

ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಅನೇಕ ಸುಳ್ಳುಪ್ರವಾದಿಗಳು ತಲೆಯೆತ್ತಿಕೊಂಡು ಎಷ್ಟೋಮಂದಿಯನ್ನು ವಂಚಿಸುವರು.


ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.


‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.


ನಾನು ಬಂದಿರುವುದು ಪಿತನ ಹೆಸರಿನಲ್ಲೇ. ಆದರೂ ನೀವು ನನ್ನನ್ನು ಬರಮಾಡಿಕೊಳ್ಳುವುದಿಲ್ಲ. ಬೇರೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದನೆಂದರೆ ಅಂಥವನನ್ನು ನೀವು ಬರಮಾಡಿಕೊಳ್ಳುತ್ತೀರಿ.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಸರ್ವೇಶ್ವರ: “ಈ ಪ್ರವಾದಿಗಳನ್ನು ಕಳುಹಿಸಿದವನು ನಾನಲ್ಲ; ತಾವೇ ಓಡೋಡಿ ಬಂದಿದ್ದಾರೆ. ನಾನು ಇವರಿಗೆ ಏನೂ ಹೇಳಲಿಲ್ಲ; ತಾವೇ ಪ್ರವಾದನೆ ಮಾಡುತ್ತಿದ್ದಾರೆ.


ಸರ್ವೇಶ್ವರ ಇಂತೆನ್ನುತ್ತಾರೆ:- ಬಾಬಿಲೋನಿಯರು ನಿಮ್ಮಿಂದ ಖಂಡಿತವಾಗಿ ತೊಲಗಿಹೋಗುವರು ಎಂದುಕೊಂಡು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ಅವರು ಹೋಗುವುದಿಲ್ಲ.


ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.


ಎಂದೇ ಯೇಸು ಮತ್ತೆ ಇಂತೆಂದರು: “ನರಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು.


ಅಸತ್ಯವಾದಿ ಎಂದರೆ ಯಾರು? ಯೇಸುವೇ ಕ್ರಿಸ್ತ ಎಂಬುದನ್ನು ಯಾರು ಅಲ್ಲಗಳೆಯುತ್ತಾನೋ ಅವನೇ ಅಸತ್ಯವಾದಿ; ಅವನೇ ಕ್ರಿಸ್ತವಿರೋಧಿ. ಅವನು ಪಿತನನ್ನು ಮತ್ತು ಪುತ್ರನನ್ನು ತಿರಸ್ಕರಿಸುತ್ತಾನೆ.


ಯೇಸುವನ್ನು ಒಪ್ಪಿಕೊಳ್ಳದ ಆತ್ಮ ದೇವರಿಂದ ಪ್ರೇರಿತವಾದುದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಅದು ಬರುವುದೆಂದು ನೀವು ಕೇಳಿದ್ದೀರಿ; ಈಗಾಗಲೇ ಅದು ಲೋಕದಲ್ಲಿ ತಲೆದೋರಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು