Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:5 - ಕನ್ನಡ ಸತ್ಯವೇದವು C.L. Bible (BSI)

5 ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮದಲಿಂಗನು ಬರುವದಕ್ಕೆ ತಡಮಾಡಲು ಅವರೆಲ್ಲರು ತೂಕಡಿಸಿ ಮಲಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮದುಮಗನ ಆಗಮನ ತಡವಾಯಿತು. ಅವರೆಲ್ಲರೂ ಆಯಾಸದಿಂದ ತೂಕಡಿಸುತ್ತಾ ನಿದ್ರೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮದುಮಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸುತ್ತಾ ನಿದ್ರೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ನ್ಹವ್ರೊ ಯೆವ್ಕ್ ಎಳ್ ಹೊಲ್ಲ್ಯಾಕ್ ತೆನಿ ಸಗ್ಳೆ ಜಾನಾ ಝೆಮುನ್ಗೆತ್-ಝೆಮುನ್ಗೆತ್ ನಿಜುನ್ ಪಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:5
23 ತಿಳಿವುಗಳ ಹೋಲಿಕೆ  

ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ಬಳಿಕ ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳತೊಡಗಿದರು: “ಒಬ್ಬಾತ ಒಂದು ದ್ರಾಕ್ಷಿತೋಟ ಮಾಡಿಸಿದ. ಕಾರಣಾಂತರ ಅದನ್ನು ಗೇಣಿದಾರರಿಗೆ ವಹಿಸಿ, ದೀರ್ಘಕಾಲ ಹೊರನಾಡಿಗೆ ಪ್ರವಾಸ ಹೋದ.


ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ‘ನನ್ನ ಯಜಮಾನ ತಡಮಾಡುವನು’ ಎಂದು ನೆನಸಿಕೊಂಡು,


“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ


ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿಬಂದ.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.


ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.


ಯೇಸು ಮರಳಿ ಆ ಶಿಷ್ಯರ ಬಳಿಗೆ ಬಂದಾಗ ಅವರು ಇನ್ನೂ ನಿದ್ರಾವಸ್ಥೆಯಲ್ಲಿದ್ದರು. ಅವರ ಕಣ್ಣುಗಳು ಭಾರವಾಗಿ ಇದ್ದವು.


ಅನಂತರ ಆ ಮೂವರು ಶಿಷ್ಯರ ಬಳಿಗೆ ಬಂದು, ಅವರು ನಿದ್ರಿಸುತ್ತಿರುವುದನ್ನು ಕಂಡರು. ಪೇತ್ರನನ್ನು ಉದ್ದೇಶಿಸಿ, “ಏನಿದು, ಒಂದು ಗಂಟೆಯಾದರೂ ನನ್ನೊಡನೆ ಎಚ್ಚರವಾಗಿರಲು ನಿಮ್ಮಿಂದ ಆಗದೇ ಹೋಯಿತೇ?


ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ :


ನಲ್ಲೆ : ನನ್ನ ಪ್ರಾಣಕಾಂತನನ್ನು ರಾತ್ರಿಯೆಲ್ಲಾ ಹುಡುಕಿದೆ ಹಾಸಿಗೆಯ ಮೇಲೆ ಹಾತೊರೆದೆ ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ.


ನಾನು ಬರುವವರೆಗೆ ನೀವು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿದ್ದರೆ ಅಷ್ಟೇ ಸಾಕು.


ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.


“ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು.


ಇತ್ತ ಭಕ್ತಜನರು ಜಕರೀಯನಿಗಾಗಿ ಎದುರು ನೋಡುತ್ತಾ ದೇವಾಲಯದಲ್ಲಿ ಅವನು ಇಷ್ಟು ತಡಮಾಡಲು ಕಾರಣವೇನಿರಬಹುದೆಂದು ಆಶ್ಚರ್ಯಪಡುತ್ತಿದ್ದರು.


ತೆಗೆದುಹಾಕಿರುವೆನಲ್ಲಾ ನನ್ನ ಅಂಗಿಯನ್ನು ಮತ್ತೆ ಅದನು ಹಾಕಿಕೊಳ್ಳುವುದೆಂತು? ತೊಳೆದಿರುವೆನಲ್ಲಾ ನನ್ನ ಪಾದಗಳನು ಮತ್ತೆ ಅವುಗಳನ್ನು ಕೊಳೆಮಾಡಿಕೊಳ್ಳುವುದೆಂತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು