Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:18 - ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಅವರು, “ಪಟ್ಟಣದಲ್ಲಿ ನಾನು ಸೂಚಿಸುವಂಥವನ ಬಳಿಗೆ ಹೋಗಿರಿ. ‘ನನ್ನ ಕಾಲ ಸಮೀಪಿಸಿತು. ಪಾಸ್ಕವನ್ನು ನನ್ನ ಶಿಷ್ಯರ ಸಮೇತ ನಿನ್ನ ಮನೆಯಲ್ಲಿಯೇ ಆಚರಿಸಬೇಕೆಂದಿದ್ದೇನೆ’; ಇದನ್ನು ನಮ್ಮ ಗುರುವೇ ಹೇಳಿಕಳುಹಿಸಿದ್ದಾರೆ ಎಂದು ಅವನಿಗೆ ತಿಳಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು - ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ ಅವನಿಗೆ - ನನ್ನ ಕಾಲ ಸಮೀಪವಾಯಿತು, ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬಮಾಡುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದಕ್ಕೆ ಯೇಸು, “ನೀವು ನಗರಕ್ಕೆ ಹೋಗಿ ನಾನು ಸೂಚಿಸುವ ವ್ಯಕ್ತಿಯನ್ನು ಭೇಟಿಮಾಡಿ ಅವನಿಗೆ, ‘ಆರಿಸಿಕೊಂಡ ಸಮಯ ಸಮೀಪಿಸಿತು. ನಾನು ಪಸ್ಕಹಬ್ಬದ ಊಟವನ್ನು ನಿನ್ನ ಮನೆಯಲ್ಲಿ ನನ್ನ ಶಿಷ್ಯರೊಂದಿಗೆ ಮಾಡುತ್ತೇನೆ ಎಂದು ಉಪದೇಶಕನು ಹೇಳುತ್ತಾನೆ’ ಎಂಬುದಾಗಿ ತಿಳಿಸಿರಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಯೇಸು, “ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ, ‘ನನ್ನ ಸಮಯವು ಸಮೀಪವಾಗಿದೆ. ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕರು ಕೇಳುತ್ತಾರೆ’ ಎಂಬುದಾಗಿ ಅವನಿಗೆ ಹೇಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತನ್ನಾ ಜೆಜುನ್ ತೆಂಕಾ,“ಶಾರಾತ್ಲ್ಯಾ ಅಮುಕ್‌ ಹ್ಯಾ ಮಾನ್ಸಾಕ್ಡೆ ಜಾವಾ, ಅನಿ,‘ಗುರುಜಿ, ಮಾಜೊ ಎಳ್ ಜಗ್ಗೊಳ್ ಯೆಲಾ; ಮಿಯಾ ಮಾಜ್ಯಾ ಶಿಸಾಂಚ್ಯಾ ವಾಂಗ್ಡಾ ತುಜ್ಯಾ ಘರಾತ್ ಪಾಸ್ಕಾಚ್ಯಾ ಸನಾಚೆ ಜೆವಾನ್ ಕರ್‍ತಾ,’ ಮನುಲಾ ಮನುನ್ ಸಾಂಗಾ.” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:18
18 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನನಗೆ ಸೂಕ್ತ ಸಮಯ ಇನ್ನೂ ಬಂದಿಲ್ಲ, ನಿಮಗಾದರೋ ಎಲ್ಲಾ ಸಮಯವೂ ಒಂದೇ.


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.


ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.


ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.


ಹಬ್ಬಕ್ಕೆ ನೀವೇ ಹೋಗಿರಿ, ನನಗೆ ಸಮಯವು ಇನ್ನೂ ಬಂದಿಲ್ಲವಾದ ಕಾರಣ ನಾನು ಹಬ್ಬಕ್ಕೆ ಈಗ ಹೋಗುವುದಿಲ್ಲ,” ಎಂದು ಹೇಳಿ


ಅದಕ್ಕೆ ಯೇಸು, “ನರಪುತ್ರನು ಮಹಿಮೆಯನ್ನು ಹೊಂದುವ ಗಳಿಗೆ ಬಂದಿದೆ.


ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.


ಹೀಗೆ ಹೇಳಿದ ಮೇಲೆ ಅವಳು ತನ್ನ ಸೋದರಿಯನ್ನು ಕರೆಯಲು ಹೋದಳು. ಅವಳನ್ನು ಕಂಡು, “ಬೋಧಕರು ಬಂದಿದ್ದಾರೆ; ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದಳು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯೀರನ ಮನೆಯಿಂದ ಕೆಲವರು ಬಂದು ಅವನಿಗೆ, “ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?” ಎಂದರು.


“ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.


ಒಡೆಯ ಎಂದೂ ಕರೆಯಿಸಿಕೊಳ್ಳಬೇಡಿ; ಏಕೆಂದರೆ ನಿಮಗಿರುವ ಒಡೆಯ ಒಬ್ಬನೇ, ‘ಆತನೇ ಕ್ರಿಸ್ತ.’ ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು.


ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.


ಯಾವನಾದರೂ ನಿಮ್ಮನ್ನು ಏನಾದರೂ ಕೇಳಿದರೆ, ‘ಇವು ಪ್ರಭುವಿಗೆ ಬೇಕಾಗಿವೆ’ ಎನ್ನಿ. ಅವನು ತಕ್ಷಣ ಕಳುಹಿಸಿಕೊಡುವನು,” ಎಂದು ಹೇಳಿಕಳುಹಿಸಿದರು.


ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ).


ಅದರಂತೆಯೇ ಅವನು ಯೇಸುಸ್ವಾಮಿಯ ಸಮೀಪಕ್ಕೆ ನೇರವಾಗಿ ಬಂದು, “ಗುರುವೇ, ನಮಸ್ಕಾರ,” ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


ಯೇಸು ಸೂಚಿಸಿದಂತೆಯೇ ಶಿಷ್ಯರು ಹೋಗಿ ಪಾಸ್ಕಭೋಜನವನ್ನು ತಯಾರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು