Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:25 - ಕನ್ನಡ ಸತ್ಯವೇದವು C.L. Bible (BSI)

25 ಗುರುದ್ರೋಹಿಯಾದ ಯೂದನು ಆಗ, “ಗುರುವೇ, ಅವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಅದು ನಿನ್ನ ಬಾಯಿಂದಲೇ ಬಂದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಆತನನ್ನು ಹಿಡುಕೊಡಬೆಕೆಂದಿದ್ದ ಯೂದನು - ಗುರುವೇ, ನಾನಲ್ಲವಲ್ಲ? ಅನ್ನಲಾಗಿ ಯೇಸು ಅವನಿಗೆ - ನೀನೇ ಹೇಳಿದ್ದೀ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ, ಯೇಸುವನ್ನು ಆತನ ಶತ್ರುಗಳಿಗೆ ಒಪ್ಪಿಸಿಕೊಡಲಿದ್ದ ಯೂದನು, “ಗುರುವೇ, ನಿನಗೆ ವಿರೋಧವಾಗಿರುವವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಹೌದು, ಅವನು ನೀನೇ?” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಯೇಸುವನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ಅವನು ನಾನಲ್ಲವಲ್ಲಾ?” ಎಂದನು. “ನೀನೇ ಹೇಳಿದ್ದೀ,” ಎಂದು ಯೇಸು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ವಿಶ್ವಾಸ್ ಘಾತ್ ಕರ್‍ತಲೊ ಜುದಾಸ್ ಬೊಲುಲಾಲೊ ಅನಿ “ಗುರುಜಿ, ಖರೆಬಿ ಮಿಯಾ ತರ್ ನ್ಹಯ್, ನ್ಹಯ್ ತೊ?” ಮನುನ್ ಜೆಜುಕ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ತಿಯಾ ಸಾಂಗ್ಲೆ ತಸೆಚ್.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:25
11 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


ಯೇಸುಸ್ವಾಮಿಯನ್ನು ರಾಜ್ಯಪಾಲನ ಮುಂದೆ ನಿಲ್ಲಿಸಿದರು. “ನೀನು ಯೆಹೂದ್ಯರ ಅರಸನೋ?” ಎಂದು ರಾಜ್ಯಪಾಲ ಪ್ರಶ್ನಿಸಿದನು. ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಮರುನುಡಿದರು.


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ಅದಕ್ಕೆ ಅವರೆಲ್ಲರೂ, “ಹಾಗಾದರೆ, ನೀನು ದೇವರ ಪುತ್ರನೋ?’ ಎಂದು ಕೇಳಿದರು. “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಯೇಸು ಉತ್ತರಕೊಡಲು ಅವರು,


ಅದರಂತೆಯೇ ಅವನು ಯೇಸುಸ್ವಾಮಿಯ ಸಮೀಪಕ್ಕೆ ನೇರವಾಗಿ ಬಂದು, “ಗುರುವೇ, ನಮಸ್ಕಾರ,” ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.


ವ್ಯಭಿಚಾರಿಣಿಯ ವರ್ತನೆ ಹೀಗಿದೆ: ಅವಳು ಉಣ್ಣುತ್ತಾಳೆ, ಬಾಯಿ ಒರೆಸಿಕೊಳ್ಳುತ್ತಾಳೆ. ಬಳಿಕ ‘ನಾನು ತಪ್ಪುಮಾಡಲಿಲ್ಲವಲ್ಲಾ’ ಎನ್ನುತ್ತಾಳೆ.


ಅವರು ಹೋದನಂತರ, ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದು ಕೇಳಿದನು. ಅದಕ್ಕೆ ಅವನು, “ನಿಮ್ಮ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ,” ಎಂದು ಉತ್ತರಕೊಟ್ಟನು.


ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.


ಇದಾದ ಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಇಸ್ಕರಿಯೋತಿನ ಯೂದ ಎಂಬಾತ ಮುಖ್ಯಯಾಜಕರ ಬಳಿಗೆ ಹೋದನು.


ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು