Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:28 - ಕನ್ನಡ ಸತ್ಯವೇದವು C.L. Bible (BSI)

28 ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇದು ಹೊಸ ಒಡಂಬಡಿಕೆಯನ್ನು ಸ್ಥಾಪಿಸುವ ನನ್ನ ರಕ್ತ. ಇದು ಅನೇಕ ಜನರ ಪಾಪಗಳ ಕ್ಷಮೆಗಾಗಿ ಸುರಿಸಲ್ಪಡುವ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹೆ ದೆವಾಚ್ಯಾ ನವ್ಯಾ ಕರಾರಾಚ್ಯಾ ವರ್‍ತಿ ಛಪ್ಪೊ ಮಾರ್‍ತಲೆ ಮಾಜೆ ರಗಾತ್, ಲೈ ಜಾನಾಂಚ್ಯಾ ಪಾಪಾಂಚ್ಯಾ ಮಾಪಿ ಸಾಟ್ನಿ ವೊತಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:28
26 ತಿಳಿವುಗಳ ಹೋಲಿಕೆ  

ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ರಕ್ತ ಸುರಿಸಿ ನೀವು ನನ್ನೊಡನೆ ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಕರೆತರುವೆನು ನಿಮ್ಮವರನು ಸೆರೆಯಾಳತ್ವದಿಂದ ಮೇಲೆತ್ತುವೆನು ನಿಮ್ಮವರನು ಆ ಸೆರೆಬಾವಿಯಿಂದ.


ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.


ಬಳಿಕ ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ನನ್ನ ಸ್ಮರಣೆಗಾಗಿ ಇದನ್ನು ಮಾಡಿರಿ,” ಎಂದರು.


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ಹೇಗೆ ಒಬ್ಬ ಮನುಷ್ಯನ ಅವಿಧೇಯತೆಯಿಂದ ಎಲ್ಲರೂ ಪಾಪಿಗಳಾದರೋ, ಹಾಗೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು ಹೊಂದುತ್ತಾರೆ.


ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ


ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವುವು.


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.


ಈ ಪ್ರವಾದನೆಗೆ ಅನುಗುಣವಾಗಿ ಯೊವಾನ್ನನು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ; ಸ್ನಾನದೀಕ್ಷೆಯನ್ನು ಪಡೆದುಕೊಳ್ಳಿ. ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು,” ಎಂದು ಬೆಂಗಾಡಿನಲ್ಲಿ ಜನರಿಗೆ ಸಾರಿ ಹೇಳುತ್ತಾ ಸ್ನಾನದೀಕ್ಷೆ ಕೊಡುತ್ತಾ ಇದ್ದನು.


ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.


ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಡುತ್ತಾ ಇಂತೆಂದರು: “ಇದರಲ್ಲಿ ಇರುವುದನ್ನು ಎಲ್ಲರೂ ಪಾನಮಾಡಿ;


ನಾನು ನನ್ನ ಪಿತನ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸ ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು