Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:38 - ಕನ್ನಡ ಸತ್ಯವೇದವು C.L. Bible (BSI)

38 “ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಮತ್ತು ಅವರಿಗೆ - ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರ್ರಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಅವರಿಗೆ, “ನನ್ನ ಆತ್ಮವು ದುಃಖದಿಂದ ತುಂಬಿಹೋಗಿದೆ. ನನ್ನ ಹೃದಯವು ದುಃಖದಿಂದ ಒಡೆದುಹೋಗುವಂತಿದೆ. ನೀವು ನನ್ನೊಂದಿಗೆ ಎಚ್ಚರವಾಗಿದ್ದು ಇಲ್ಲೇ ಇರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತೆನಿ ತೆಂಕಾ,“ಮಾಜ್ಯಾ ಜಿವಾಚೊ ಹ್ಯೊ ಮೊಟೊ ಸಂಕಟ್ ಮಾಕಾ ಚಿರ್ಡುನ್ ಮಾರುನ್ ಟಾಕ್ತಾ ಸರ್ಕೆ ಹೊವ್ಲಾ, ತುಮಿ ಹಿತ್ತೆ ಇಬೆ ರ್‍ಹಾವಾ ಅನಿ ಮಾಜ್ಯಾ ವಾಂಗ್ಡಾ ಜಾಗೆ ರ್‍ಹಾವಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:38
19 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ಅಲ್ಲಿ ಅತೀವ ದುಃಖದಿಂದ ಚಿಂತಾಕ್ರಾಂತರಾಗಿ, “ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ; ನೀವು ಇಲ್ಲೇ ಇದ್ದು ಎಚ್ಚರವಾಗಿರಿ,” ಎಂದರು.


ತೆಗೆದುಹಾಕಿರುವೆನಲ್ಲಾ ನನ್ನ ಅಂಗಿಯನ್ನು ಮತ್ತೆ ಅದನು ಹಾಕಿಕೊಳ್ಳುವುದೆಂತು? ತೊಳೆದಿರುವೆನಲ್ಲಾ ನನ್ನ ಪಾದಗಳನು ಮತ್ತೆ ಅವುಗಳನ್ನು ಕೊಳೆಮಾಡಿಕೊಳ್ಳುವುದೆಂತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು