Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:39 - ಕನ್ನಡ ಸತ್ಯವೇದವು C.L. Bible (BSI)

39 ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತೊ ಉಲ್ಲೆ ಫಿಡೆ ಗೆಲೊ ಅನಿ ಜಮ್ನಿ ವರ್‍ತಿ ಡಬ್ ಪಡುನ್, “ಮಾಜ್ಯಾ ಬಾಬಾ, ಹೊತಾ ಜಾಲ್ಯಾರ್, ಹೆ ಕಸ್ಟಾಚೆ ಆಯ್ದಾನ್ ಮಾಜ್ಯಾ ವೈನಾ ಕಾಡುನ್ ಘೆ! ಖರೆ ಮಾಜ್ಯಾ ಮನಾ ಸರ್ಕೆ ನ್ಹಯ್, ತುಜ್ಯಾ ಮನಾ ಸರ್ಕೆ ಹೊಂವ್ದಿತ್,” ಮನುನ್ ಮಾಗ್ನಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:39
27 ತಿಳಿವುಗಳ ಹೋಲಿಕೆ  

ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ.


ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ,”


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.


ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು. ಏಳಿ, ಇಲ್ಲಿಂದ ಹೋಗೋಣ,” ಎಂದರು.


ಆಗ ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು, ನನ್ನ ಪಿತನೇ ಕೊಟ್ಟಿರುವ ಕಷ್ಟದ ಕೊಡವಿದು; ಇದರಲ್ಲಿರುವುದನ್ನು ನಾನು ಕುಡಿಯದೆಹೋದರೆ ಹೇಗೆ?” ಎಂದು ನುಡಿದರು.


ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ , ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು.


ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.


‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು.


ಆಗ ಮೋಶೆ ಮತ್ತು ಆರೋನರು ಇಸ್ರಯೇಲರ ಸರ್ವಸಮೂಹದ ಮುಂದೆ ಅಡ್ಡಬಿದ್ದರು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ದಾವೀದನು ಕಣ್ಣೆತ್ತಿ ನೋಡಿ ಸರ್ವೇಶ್ವರನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಜೆರುಸಲೇಮಿಗೆ ವಿರೋಧವಾಗಿ ಹಿರಿದ ಕತ್ತಿ ಇರುವುದನ್ನೂ ಕಂಡನು. ಆಗ ಅವನೂ ಹಿರಿಯರೂ ಗೋಣಿತಟ್ಟನ್ನು ಉಟ್ಟುಕೊಂಡು ಬೋರಲಾಗಿ ಬಿದ್ದರು.


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


ಪೇತ್ರನು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಕೊರ್ನೇಲಿಯನು ಅವನನ್ನು ಎದುರುಗೊಂಡು, ಪಾದಕ್ಕೆರಗಿ, ಸಾಷ್ಟಾಂಗ ನಮಸ್ಕಾರಮಾಡಿದನು.


ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು!


ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು.


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ಯೇಸು ಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು