Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:40 - ಕನ್ನಡ ಸತ್ಯವೇದವು C.L. Bible (BSI)

40 ಅನಂತರ ಆ ಮೂವರು ಶಿಷ್ಯರ ಬಳಿಗೆ ಬಂದು, ಅವರು ನಿದ್ರಿಸುತ್ತಿರುವುದನ್ನು ಕಂಡರು. ಪೇತ್ರನನ್ನು ಉದ್ದೇಶಿಸಿ, “ಏನಿದು, ಒಂದು ಗಂಟೆಯಾದರೂ ನನ್ನೊಡನೆ ಎಚ್ಚರವಾಗಿರಲು ನಿಮ್ಮಿಂದ ಆಗದೇ ಹೋಯಿತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆಮೇಲೆ ಆ ಶಿಷ್ಯರ ಬಳಿಗೆ ಬಂದು ಅವರು ನಿದ್ದೆ ಮಾಡುವದನ್ನು ಕಂಡು ಪೇತ್ರನಿಗೆ - ಹೀಗೋ? ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದನು. ಅವರು ನಿದ್ರಿಸುತ್ತಿರುವುದನ್ನು ಕಂಡು ಆತನು ಪೇತ್ರನಿಗೆ, “ನೀವು ನನ್ನೊಂದಿಗೆ ಒಂದು ಗಂಟೆಯ ಕಾಲ ಎಚ್ಚರವಾಗಿರಲು ಸಾಧ್ಯವಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಏನು, ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಮಾನಾ ತೊ ಪರ್ತುನ್ ತಿಗ್ ಜಾನಾ ಶಿಸಾನಿಕ್ಡೆ ಯೆಲೊ. ತೆನಿ ನಿಜೆನ್ ಝೆಮುಲಾಗಲ್ಲೆ. ತನ್ನಾ ಜೆಜುನ್ ಪೆದ್ರುಕ್, “ತುಮ್ಕಾ ತಿಗ್ಯಾಕ್ನಿ ಮಾಜೆಸಾಟ್ನಿ ಎಕ್ ತಾಸ್‍ಬರ್ ಸೈತ್ ಜಾಗೆ ರ್‍ಹಾವ್ಕ್ ಹೊಯ್ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:40
12 ತಿಳಿವುಗಳ ಹೋಲಿಕೆ  

ಅನಂತರ ಹಿಂದಿರುಗಿ ಬಂದು, ಆ ಮೂವರು ಶಿಷ್ಯರು ನಿದ್ರಿಸುತ್ತಿದ್ದುದನ್ನು ಕಂಡು, ಪೇತ್ರನಿಗೆ, “ಸಿಮೋನನೇ, ನಿದ್ದೆಮಾಡುತ್ತಿರುವಿಯೋ! ಒಂದು ಗಂಟೆಯಾದರೂ ಎಚ್ಚರವಾಗಿರಲು ನಿನಗೆ ಸಾಧ್ಯವಾಗದೆ ಹೋಯಿತೋ!


ಯೇಸು ಪ್ರಾರ್ಥನೆಯಿಂದ ಎದ್ದು ಶಿಷ್ಯರ ಬಳಿಗೆ ಬಂದರು. ಶಿಷ್ಯರಾದರೋ ದುಃಖದಿಂದ ಬಳಲಿ ನಿದ್ರಿಸುತ್ತಿದ್ದರು.


ಯೇಸು ಮರಳಿ ಆ ಶಿಷ್ಯರ ಬಳಿಗೆ ಬಂದಾಗ ಅವರು ಇನ್ನೂ ನಿದ್ರಾವಸ್ಥೆಯಲ್ಲಿದ್ದರು. ಅವರ ಕಣ್ಣುಗಳು ಭಾರವಾಗಿ ಇದ್ದವು.


ಗಾಢ ನಿದ್ರೆಯಲ್ಲಿದ್ದ ಪೇತ್ರ ಮತ್ತು ಸಂಗಡಿಗರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರೊಡನೆ ನಿಂತಿದ್ದ ಆ ಇಬ್ಬರನ್ನೂ ಕಂಡರು.


ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ಸರಿಯೆ, ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ನುಡಿದನು. ಅದರಂತೆಯೇ ಉಳಿದ ಶಿಷ್ಯರೂ ದನಿಗೂಡಿಸಿದರು.


“ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.


ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು.


ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು.


ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು; ಅವನೂ ಅವನ ಜೊತೆಯಲ್ಲಿರುವವರೂ ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು,” ಎಂದು ಹೇಳಿಸಿದನು.


ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ :


ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು