Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:46 - ಕನ್ನಡ ಸತ್ಯವೇದವು C.L. Bible (BSI)

46 ಎದ್ದೇಳಿ, ಹೋಗೋಣ. ನನಗೆ ದ್ರೋಹ ಬಗೆಯುವವನು ಹತ್ತಿರವೇ ಇದ್ದಾನೆ, ನೋಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಏಳಿರಿ, ಹೋಗೋಣ; ನನ್ನನ್ನು ಹಿಡುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನಾವು ಹೋಗಬೇಕು. ಎದ್ದೇಳಿ! ನನ್ನನ್ನು ವೈರಿಗಳಿಗೆ ಒಪ್ಪಿಸುವ ಮನುಷ್ಯನು ಇಲ್ಲಿಯೇ ಬರುತ್ತಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 “ಉಟಾ ಅಮಿ ಜಾಂವಾ. ಅಬಕಾ, ಮಾಕಾ ವಿಶ್ವಾಸ್‍ ಘಾತಾನ್ ಧರುನ್ ದಿತಲೊ ಮಾನುಸ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:46
11 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು. ಏಳಿ, ಇಲ್ಲಿಂದ ಹೋಗೋಣ,” ಎಂದರು.


ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ.


ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.


ಕೂಡಲೆ ಆ ಫಿಲಿಷ್ಟಿಯನು ದಾವೀದನ ಮೇಲೆ ಎರಗಲು ಮತ್ತೆ ಧಾವಿಸಿದನು. ದಾವೀದನೂ ಫಿಲಿಷ್ಟಿಯರ ಸೈನ್ಯದ ಕಡೆಗೆ ನುಗ್ಗಿ ಆ ಫಿಲಿಷ್ಟಿಯನನ್ನು ಎದುರುಗೊಳ್ಳಲು ಓಡಿದನು.


ಆಗ ಅವರು ಶಿಷ್ಯರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕೆ ಮುಂಚೆ ನಿಮ್ಮೊಡನೆ ಈ ಪಾಸ್ಕಭೋಜನವನ್ನು ಮಾಡಲು ಬಹಳ ಅಪೇಕ್ಷೆಯಿಂದ ಎದುರುನೋಡುತ್ತಿದ್ದೆನು.


ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ದೊಡ್ಡ ಗುಂಪು ಅವನೊಂದಿಗೆ ಇತ್ತು. ಮುಖ್ಯಯಾಜಕರೂ ಜನರ ಪ್ರಮುಖರೂ ಅವರನ್ನು ಕಳುಹಿಸಿದ್ದರು.


ನರಪುತ್ರನು ದುರ್ಜನರ ಕೈವಶ ಆಗಲಿದ್ದಾನೆ. ಎದ್ದೇಳಿ, ಹೋಗೋಣ. ಇಗೋ, ನೋಡಿ, ನನಗೆ ದ್ರೋಹ ಬಗೆಯುವವನು ಹತ್ತಿರವೇ ಇದ್ದಾನೆ,” ಎಂದರು.


“ಆದರೆ ಇಗೋ, ನನಗೆ ದ್ರೋಹ ಬಗೆಯುವವನು ನನ್ನೊಂದಿಗೆ ಇದೇ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದಾನೆ.


ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು