Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:53 - ಕನ್ನಡ ಸತ್ಯವೇದವು C.L. Bible (BSI)

53 ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ನಾನು ನನ್ನ ತಂದೆಯನ್ನು ಕೇಳಿದ್ದರೆ, ಆತನು ನನಗೆ ದೇವದೂತರ ಹನ್ನೆರಡು ಸೇನಾದಳಗಳನ್ನು ನೀಡುತ್ತಿದ್ದನೆಂಬುದು ನಿನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ನಾನು ಈಗ ನನ್ನ ತಂದೆಗೆ ಕೇಳಿಕೊಂಡರೆ ಅವರು ಈಗಲೇ ಹನ್ನೆರಡು ದಳಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡಲಾರರೆಂದು ನೀನು ನೆನಸುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 “ಮಿಯಾ ಮಾಜ್ಯಾ ಬಾಬಾಕ್ಡೆ ಮಾಗಟ್ಲ್ಯಾರ್ ತೊ ಮಾಜ್ಯಾ ಮಜತಿಕ್ ಮನುನ್ ಸೈನಿಕಾಂಚ್ಯಾ ಬಾರಾ ತಾಂಡ್ಯಾಂನ್ಚ್ಯಾನ್ಕಿ ಜಾಸ್ತಿ ದೆವಾಚ್ಯಾ ದುತಾಕ್ನಿ ಧಾಡಿನಸ್ತಾನಾ ರ್‍ಹಾತಾ ಮನುನ್ ತಿಯಾ ಚಿಂತ್ಲೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:53
12 ತಿಳಿವುಗಳ ಹೋಲಿಕೆ  

ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.


“ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


ಯೇಸು, “ನಿನ್ನ ಹೆಸರೇನು?” ಎಂದು ಕೇಳಲು, ಅವನು “ಗಣ", ಎಂದು ಉತ್ತರಕೊಟ್ಟನು; ಏಕೆಂದರೆ, ಅನೇಕ ಪಿಶಾಚಿಗಳು ಅವನನ್ನು ಹೊಕ್ಕಿದ್ದವು.


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


“ನಿನ್ನ ಹೆಸರೇನು?” ಎಂದು ಯೇಸು ಅವನನ್ನು ಕೇಳಲು, “ನನ್ನ ಹೆಸರು ‘ಗಣ’; ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದನು.


ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.


ಅದಕ್ಕೆ ಯೇಸು, “ನನ್ನ ಸಾಮ್ರಾಜ್ಯ ಈ ಲೋಕದ್ದಲ್ಲ, ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು