Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:55 - ಕನ್ನಡ ಸತ್ಯವೇದವು C.L. Bible (BSI)

55 ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಅದೇ ಗಳಿಗೆಯಲ್ಲಿ ಯೇಸು ಗುಂಪುಗುಂಪಾಗಿ ಕೂಡಿದ್ದ ಜನರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ? ನಾನು ದಿನಾಲು ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ನಂತರ ಯೇಸು ಆ ಜನರಿಗೆ, “ನೀವು ಅಪರಾಧಿಯನ್ನು ಬಂಧಿಸುವವರಂತೆ ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದಿದ್ದೀರಿ. ನಾನು ಪ್ರತಿದಿನವೂ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಅಲ್ಲಿ ಬಂಧಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ತನ್ನಾ ಜೆಜುನ್ ತ್ಯಾ ಲೊಕಾಂಚ್ಯಾ ತಾಂಡ್ಯಾಕ್, “ಎಕ್ ಚೊರಾಕ್ ಧರುಕ್ ಯೆಲ್ಯಾ ಸರ್ಕೆ ಕೊಯ್ತೆ ಅನಿ ಟೊನೆ ಘೆವ್ನ್ ತುಮಿ ಮಾಕಾ ಧರುಕ್ ಯೆಲ್ಯಾಶಿ? ಸದ್ದಿಚ್ ಮಿಯಾ ದೆವಾಚ್ಯಾ ಗುಡಿತ್ ತುಮ್ಚ್ಯಾ ಮದ್ದಿಚ್ ಬಸುನ್ ತುಮ್ಕಾ ಶಿಕ್ವಿ, ತನ್ನಾ ತುಮಿ ಮಾಕಾ ಧರುಕ್‍ನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:55
15 ತಿಳಿವುಗಳ ಹೋಲಿಕೆ  

ಮರುದಿನ ಮುಂಜಾನೆ ಅವರು ಮತ್ತೆ ಮಹಾದೇವಾಲಯಕ್ಕೆ ಬಂದರು. ಜನರು ಸುತ್ತಲೂ ಬಂದು ನೆರೆಯಲು ಯೇಸು ಕುಳಿತುಕೊಂಡು ಬೋಧಿಸತೊಡಗಿದರು.


ಬಳಿಕ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಉಪದೇಶಮಾಡುತ್ತಾ ಈ ಪ್ರಶ್ನೆ ಎತ್ತಿದರು: “ಅಭಿಷಿಕ್ತನಾದ ಲೋಕೋದ್ಧಾರಕನನ್ನು ಧರ್ಮಶಾಸ್ತ್ರಿಗಳು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲಾ! ಅದು ಹೇಗಾದೀತು?


ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.


ಹಬ್ಬವು ಅರ್ಧಕ್ಕೆ ಅರ್ಧ ಮುಗಿಯತು. ಆಗ ಯೇಸು ಮಹಾದೇವಾಲಯಕ್ಕೆ ಹೋಗಿ ಬೋಧನೆ ಮಾಡತೊಡಗಿದರು.


ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ದೊಡ್ಡ ಗುಂಪು ಅವನೊಂದಿಗೆ ಇತ್ತು. ಮುಖ್ಯಯಾಜಕರೂ ಜನರ ಪ್ರಮುಖರೂ ಅವರನ್ನು ಕಳುಹಿಸಿದ್ದರು.


ಅಲ್ಲಿಂದ ಯೇಸುಸ್ವಾಮಿ ಜೋರ್ಡನ್ ನದಿಯ ಆಚೆಕಡೆಯಿದ್ದ ಜುದೇಯ ಪ್ರಾಂತ್ಯಕ್ಕೆ ಬಂದರು. ಅಲ್ಲಿಯೂ ಜನರು ಗುಂಪುಗುಂಪಾಗಿ ಅವರ ಬಳಿಗೆ ಬಂದರು. ಯೇಸು ಅವರಿಗೂ ಉಪದೇಶಮಾಡಿದರು.


ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.


ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.


ಒಂದು ದಿನ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಜನರಿಗೆ ಬೋಧನೆಮಾಡುತ್ತಾ ಶುಭಸಂದೇಶವನ್ನು ಪ್ರಕಟಿಸುತ್ತಾ ಇದ್ದರು. ಆಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅಲ್ಲಿಗೆ ಬಂದು,


ಮಹಾದೇವಾಲಯದೊಳಗೆ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಕೋಣೆಯಲ್ಲಿ ಯೇಸು ಮಾತನಾಡುತ್ತಾ ಹೇಳಿದ ಮಾತುಗಳಿವು. ಅವರ ಗಳಿಗೆ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು