Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:63 - ಕನ್ನಡ ಸತ್ಯವೇದವು C.L. Bible (BSI)

63 ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಆಗ ಮಹಾಯಾಜಕನು - ನಿನಗೆ ಜೀವಸ್ವರೂಪನಾದ ದೇವರ ಆಣೆಯನ್ನು ಇಡುತ್ತೇನೆ; ನೀನು ದೇವಕುಮಾರನಾದ ಕ್ರಿಸ್ತನು ಹೌದೋ ಅಲ್ಲವೋ ಎಂಬದನ್ನು ನಮಗೆ ಹೇಳಬೇಕು ಎಂದು ಅನ್ನಲಾಗಿ ಯೇಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 ಆದರೆ ಯೇಸು ಮೌನವಾಗಿದ್ದನು. ಪ್ರಧಾನಯಾಜಕನು ಮತ್ತೆ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದೇನೆ, ನೀನು ದೇವಕುಮಾರನಾದ ಕ್ರಿಸ್ತನೋ? ನಮಗೆ ತಿಳಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

63 ಖರೆ ಜೆಜು ಗಪ್ಪುಚ್ ಹೊತ್ತೊ. ತನ್ನಾ ಮಹಾಯಾಜಕಾನ್, “ಮಿಯಾ ಝಿತ್ತ್ಯಾ ದೆವಾಚ್ಯಾ ಆನೆನ್ ತುಕಾ ಇಚಾರುಲಾ, ತಿಯಾ ದೆವಾಚೊ ಲೆಕ್ ಕ್ರಿಸ್ತ್ ಹೊಲ್ಯಾರ್ ಅಮ್ಕಾ ಸಾಂಗ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:63
42 ತಿಳಿವುಗಳ ಹೋಲಿಕೆ  

“ಈ ಕೆಳಕಂಡ ಸಂದರ್ಭಗಳಲ್ಲಿ ಪಾಪಪರಿಹಾರಕ ಬಲಿಗಳನ್ನು ಒಪ್ಪಿಸಬೇಕಾಗುತ್ತದೆ: ಒಬ್ಬನು ತಾನು ಕಂಡು ಕೇಳಿದ್ದಕ್ಕೆ ನ್ಯಾಯಸ್ಥಾನದಲ್ಲಿ ಸಾಕ್ಷಿಹೇಳಬೇಕೆಂದು ಅಧಿಕೃತವಾದ ಕರೆಯಿದ್ದರೂ ಸಾಕ್ಷಿ ಹೇಳದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ಆದರೆ ಮುಖ್ಯಯಾಜಕರೂ ಊರಪ್ರಮುಖರೂ ಮಾಡಿದ ಆಪಾದನೆಗಳಿಗೆ ಅವರು ಏನೂ ಉತ್ತರಕೊಡಲಿಲ್ಲ.


ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟು ಯಾವನೂ ಅದನ್ನು ಬಾಯಿಗೆ ಹಾಕಲಿಲ್ಲ.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ಅವನು ಮತ್ತೆ ಅರಮನೆಯ ಒಳಕ್ಕೆ ಬಂದು, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಉತ್ತರಕೊಡಲಿಲ್ಲ.


ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.


ಅವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.


ಆದರೆ ಯೇಸು ಮೌನವಾಗಿದ್ದರು. ಯಾವ ಉತ್ತರವನ್ನೂ ಕೊಡಲಿಲ್ಲ. ಪ್ರಧಾನಯಾಜಕನು ಪುನಃ, “ಸ್ತುತ್ಯ ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕ ನೀನೋ?” ಎಂದು ಕೇಳಿದನು.


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.


“ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ, ಈಗ ನಿನ್ನನ್ನು ನೀನೇ ರಕ್ಷಿಸಿಕೋ; ನೀನು ದೇವರ ಪುತ್ರನಾದರೆ ಶಿಲುಬೆಯಿಂದ ಇಳಿದು ಬಾ,” ಎಂದು ಮೂದಲಿಸಿದರು.


ಯೇಸು ಯಾವುದಕ್ಕೂ ಉತ್ತರಕೊಡಲಿಲ್ಲ. ಇದರಿಂದ ರಾಜ್ಯಪಾಲನಿಗೆ ಅತ್ಯಾಶ್ಚರ್ಯವಾಯಿತು.


ಇದನ್ನು ಕೇಳಿದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರು ರಾಜನಿಗೆ: “ನೆಬೂಕದ್ನೆಚ್ಚರ ಅರಸರೇ, ಈ ವಿಷಯದಲ್ಲಿ ನಾವು ನಿಮಗೆ ಏನನ್ನೂ ಹೇಳಬೇಕಾಗಿಲ್ಲ.


ಚೋರರ ಮಿತ್ರ ಸ್ವಂತ ಪ್ರಾಣಕ್ಕೆ ಶತ್ರು, ಶಾಪ ಕಿವಿಗೆ ಬೀಳುತ್ತಿದ್ದರೂ ಆತ ಮೌನ ತಾಳುವನು.


ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.


ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಎಷ್ಟುಸಾರಿ ಪ್ರಮಾಣಮಾಡಿಸಬೇಕು?” ಎಂದನು.


ಒಡನೆ ಒಬ್ಬನು ಅವನಿಗೆ, “ಈ ದಿನ ಊಟಮಾಡುವಂಥವರು ಶಾಪಗ್ರಸ್ಥರಾಗುವರೆಂದು ನಿನ್ನ ತಂದೆ ಆಣೆಯಿಟ್ಟು ಹೇಳಿದ್ದಾರೆ,” ಎಂದು ತಿಳಿಸಿದನು. ಜನರು ಬಹಳವಾಗಿ ಬಳಲಿಹೋದುದನ್ನು ಕಂಡು ಯೋನಾತಾನನು ಆ ವ್ಯಕ್ತಿಗೆ,


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ಆ ದಿವಸ ಸೌಲನು ಇಸ್ರಯೇಲರಿಗೆ, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕಾಗಿ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತ,” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹಳವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರಪದಾರ್ಥವನ್ನು ರುಚಿಸಿರಲಿಲ್ಲ.


ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ I ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? II


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ಆಗ ಪ್ರಧಾನಯಾಜಕರು ಎದ್ದುನಿಂತು ಯೇಸುವನ್ನು ನೋಡಿ, “ಈ ಜನರು ನಿನಗೆ ವಿರುದ್ಧ ತಂದಿರುವ ಆರೋಪಣೆಗಳನ್ನು ಕೇಳುತ್ತಿರುವೆಯಾ? ಇವುಗಳಿಗೆ ನಿನ್ನ ಉತ್ತರ ಏನು?” ಎಂದು ಪ್ರಶ್ನಿಸಿದರು.


ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು