Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:67 - ಕನ್ನಡ ಸತ್ಯವೇದವು C.L. Bible (BSI)

67 ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

67 ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

67 ಆಗ ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಏಟುಹಾಕಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

67 ನಂತರ ಜನರು ಅಲ್ಲಿಯೇ ಯೇಸುವಿನ ಮುಖದ ಮೇಲೆ ಉಗುಳಿದರು. ಮುಷ್ಠಿಯಿಂದ ಆತನನ್ನು ಗುದ್ದಿದರು. ಆತನ ಕೆನ್ನೆಗೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

67 ಆಮೇಲೆ ಅವರು ಯೇಸುವಿನ ಮುಖದ ಮೇಲೆ ಉಗುಳಿ ಅವರನ್ನು ಗುದ್ದಿದರು. ಬೇರೆ ಕೆಲವರು ಅವರ ಕೆನ್ನೆಗೆ ಹೊಡೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

67 ತನ್ನಾ ತೆನಿ ತೆಚ್ಯಾ ತೊಂಡಾರ್ ಥುಕ್ಲ್ಯಾನಿ, ಅನಿ ಮುಟ್ಕ್ಯಾನಿ ಮಾರ್‍ಲ್ಯಾನಿ; ಅನಿ ತೆಕಾ ಠಪ್ರಾಕ್ಯಾ ಮಾರುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:67
24 ತಿಳಿವುಗಳ ಹೋಲಿಕೆ  

ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಯೇಸು ಹೀಗೆ ಹೇಳಲು ಬಳಿಯಲ್ಲೇ ನಿಂತಿದ್ದ ಕಾವಲಾಳೊಬ್ಬನು, “ಪ್ರಧಾನ ಯಾಜಕರಿಗೆ ಉತ್ತರಕೊಡುವುದು ಹೀಗೆಯೇ?” ಎಂದು ಕೆನ್ನೆಗೆ ಹೊಡೆದನು.


ಅವರ ಮೇಲೆ ಉಗುಳಿದರು. ಆ ಕೋಲನ್ನು ಕಿತ್ತುಕೊಂಡು ತಲೆಯಮೇಲೆ ಹೊಡೆದರು.


ಅನಂತರ, ಅವರಲ್ಲಿ ಕೆಲವರು ಯೇಸುವಿನ ಮೇಲೆ ಉಗುಳಿದರು. ಅವರ ಮುಖಕ್ಕೆ ಮುಸುಕುಹಾಕಿ, ಅವರನ್ನು ಗುದ್ದಿ, “ಗುದ್ದಿದವರು ಯಾರು? ಪ್ರವಾದಿಸು ನೋಡೋಣ,” ಎನ್ನುತ್ತಿದ್ದರು. ಇದಲ್ಲದೆ ಅಲ್ಲಿದ್ದ ಪಹರೆಯವರು ಅವರಿಗೆ ಏಟಿನ ಮೇಲೆ ಏಟು ಕೊಟ್ಟು ತಮ್ಮ ವಶಕ್ಕೆ ತೆಗೆದುಕೊಂಡರು.


ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


“ಯೆಹೂದ್ಯರ ಅರಸನೇ, ನಿನಗೆ ಶುಭವಾಗಲಿ,” ಎಂದು ಜರೆಯುತ್ತಾ ಅವರ ಕೆನ್ನೆಗೆ ಹೊಡೆಯತೊಡಗಿದರು.


ಕೋಲಿನಿಂದ ಅವರ ತಲೆಯ ಮೇಲೆ ಹೊಡೆದು, ಉಗುಳಿ, ಮೊಣಕಾಲೂರಿ ಗೌರವಿಸುವಂತೆ ನಟಿಸಿದರು.


ಹೊಡೆಯುವವನಿಗೆ ಕೆನ್ನೆಕೊಡುವಾಗಲೂ ನಿಂದೆ ಅವಮಾನದಿಂದ ತೃಪ್ತಿಪಡುವಾಗಲೂ. ನಂಬಿಕೆಗೆ ಎಡೆಯಿರಲು ಸಾಧ್ಯ.


ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.


ಅಪವಾದ ಹೊರಿಸಿದವರೊಡನೆ ವಿನಯದಿಂದ ವರ್ತಿಸುತ್ತೇವೆ; ಪ್ರಪಂಚದ ಪಾಲಿಗೆ ನಾವೀಗ ಕಸಕ್ಕಿಂತಲೂ ಕಡೆ; ವಿಶ್ವಕ್ಕೇ ಹೊಲಸು!


ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಗಳಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು,” ಎಂದರು.


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!


ಕಸವನ್ನಾಗಿಯೂ ಹೊಲಸನ್ನಾಗಿಯೂ ನಮ್ಮನ್ನು ಎಸೆದುಬಿಟ್ಟೆ ರಾಷ್ಟ್ರಗಳ ನಡುವೆ.


ಅವನು ಪ್ರವಾದಿ ಯೆರೆಮೀಯನನ್ನು ಹೊಡೆಯಿಸಿ ಸರ್ವೇಶ್ವರನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲ ಬಳಿಯಲ್ಲಿದ್ದ ಸೆರೆಗೆ ಹಾಕಿಸಿದನು.


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.


ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, ‘ಅಣ್ಣನಿಗೆ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ,’ ಎಂದು ಹೇಳಬೇಕು.


ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು.


ಕೆಲವರು ಅವರ ಕೆನ್ನೆಗೆ ಹೊಡೆದು, “ಎಲೈ ಕ್ರಿಸ್ತಾ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದಿಸಿ ಹೇಳು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು