Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:70 - ಕನ್ನಡ ಸತ್ಯವೇದವು C.L. Bible (BSI)

70 “ನೀನು ಹೇಳುವುದು ಏನೆಂದು ನನಗೆ ತಿಳಿಯದು,” ಎಂದು ಪೇತ್ರನು ಎಲ್ಲರ ಮುಂದೆ ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

70 ಅವನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ” ಎಂದು ಎಲ್ಲರ ಮುಂದೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

70 ಅಲ್ಲ, ನೀನು ಏನನ್ನುತ್ತೀಯೋ ನನಗೆ ಗೊತ್ತಿಲ್ಲ ಎಂದು ಎಲ್ಲರ ಮುಂದೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

70 ಆದರೆ ಪೇತ್ರನು, ಅಲ್ಲಿದ್ದ ಜನರೆಲ್ಲರ ಎದುರಿನಲ್ಲಿ ಆಕೆಗೆ, “ನೀನು ಏನು ಹೇಳುತ್ತಿರುವೆಯೋ ನನಗೆ ಗೊತ್ತೇ ಇಲ್ಲ” ಎಂದು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

70 ಆದರೆ ಅವನು ಎಲ್ಲರ ಮುಂದೆ, “ನೀನು ಏನು ಹೇಳುತ್ತೀಯೋ ನನಗೆ ತಿಳಿಯದು,” ಎಂದು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

70 ಖರೆ ಪೆದ್ರುನ್ ತಿರಸ್ಕಾರ್ ಕರುನ್, “ತಿಯಾ ಖಚ್ಚ್ಯಾ ವಿಶಯಾತ್ ಬೊಲುಲೆಯ್ ಮನುನ್ ಮಾಕಾ ಗೊತ್ತ್ ನಾ.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:70
17 ತಿಳಿವುಗಳ ಹೋಲಿಕೆ  

ಆದಕಾರಣ ಸ್ಥಿರವಾಗಿ ನಿಂತಿರುವೆನೆಂದು ಕೊಚ್ಚಿಕೊಳ್ಳುವವನೇ, ಕುಸಿದುಬೀಳದಂತೆ ಎಚ್ಚರಿಕೆಯಿಂದಿರು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಅದು ಸರಿಯೆ. ಅವರ ಅವಿಶ್ವಾಸದ ಕಾರಣದಿಂದ ಅವರನ್ನು ಕಡಿದುಹಾಕಲಾಯಿತು. ನೀನು ದೃಢವಾಗಿ ನಿಂತಿರುವುದಾದರೋ ವಿಶ್ವಾಸದ ಪ್ರಯುಕ್ತವೇ. ಆದ್ದರಿಂದ ಗರ್ವಪಡಬೇಡ. ಭಯಭಕ್ತಿಯಿಂದಿರು.


ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು.


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


ಕೂಡಲೆ ಯೇಸುವಿನ ಸಂಗಡ ಇದ್ದ ಒಬ್ಬನು ತನ್ನ ಖಡ್ಗವನ್ನು ಹಿರಿದು, ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿಬಿಟ್ಟನು.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ತನ್ನ ಶಕ್ತಿಯಲ್ಲೆ ಭರವಸೆ ಇಡುವವನು ಮೂಢನು; ಜ್ಞಾನಿಗಳ ಮಾರ್ಗದಲ್ಲಿ ನಡೆವವನು ವಿಮುಕ್ತನಾಗುವನು.


ಇತ್ತ ಪೇತ್ರನು ಹೊರಾಂಗಣದಲ್ಲಿ ಕುಳಿತು ಇದ್ದನು. ದಾಸಿಯೊಬ್ಬಳು ಆತನ ಬಳಿಗೆ ಬಂದು, “ನೀನು ಸಹ ಗಲಿಲೇಯದ ಯೇಸುವಿನೊಂದಿಗೆ ಇದ್ದವನು,” ಎಂದಳು.


ಆತ ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿ ಬಂದಾಗ ಇನ್ನೊಬ್ಬ ದಾಸಿ ಆತನನ್ನು ಕಂಡು, “ಈತ ನಜರೇತಿನ ಯೇಸುವಿನೊಂದಿಗೆ ಇದ್ದವನೇ,” ಎಂದು ಅಲ್ಲಿದ್ದವರಿಗೆ ತಿಳಿಸಿದಳು.


ಅದಕ್ಕೆ ಆತ, “ಅವನಾರೋ ನಾನರಿಯೆನಮ್ಮಾ,” ಎಂದು ನಿರಾಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು