Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:25 - ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ಸಗ್ಳ್ಯಾ ಲೊಕಾನಿ,“ಹೆಚ್ಯಾ ಮರ್‍ನಾಚಿ ಜವಾಬ್ದಾರಿ ಅಮ್ಚ್ಯಾ ವರ್‍ತಿ ಅನಿ ಅಮ್ಚ್ಯಾ ಪೊರಾಂಚ್ಯಾ ವರ್‍ತಿ ಪಡುಂದಿತ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:25
20 ತಿಳಿವುಗಳ ಹೋಲಿಕೆ  

ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು ಆಗುವರು. ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈಮಾಡಿದ್ದಾದರೆ ಆ ರಕ್ತಾಪರಾಧ ನಮ್ಮ ತಲೆಯ ಮೇಲಿರುವುದು.


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿರಪರಾಧಿಗೆ ಮರಣ ಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆ ಆದರೆ ಆ ರಕ್ತದೋಷ ನಿಮ್ಮದಾಗಿಯೇ ಇರುವುದು.


“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು.


ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.”


ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು